<p><strong>ಬೆಂಗಳೂರು</strong>: ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಸಮಿತಿ, ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ಕಾಲೇಜಿಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ರ್ಯಾಲಿಗೆ ಗಣ್ಯರು ಚಾಲನೆ ನೀಡಿದರು.</p>.<p>ವಿಧಾನಸೌಧದ ಮುಂಭಾಗದಿಂದ ಆರಂಭವಾದ ರ್ಯಾಲಿಯು, ಮಿಲ್ಲರ್ಸ್ ರಸ್ತೆಯ ಮೂಲಕ ಸಾಗಿ ಸೇಂಟ್ ಆನ್ಸ್ ಶಾಲೆಯ ಎದುರು ಮುಕ್ತಾಯಗೊಂಡಿತು. ‘ನಮ್ಮ ನರ್ಸ್ಗಳು; ನಮ್ಮ ಭವಿಷ್ಯ’ ಎಂಬ ಭಿತ್ತಿಪತ್ರ ಹಿಡಿದು ನರ್ಸಿಂಗ್ ವಿದ್ಯಾರ್ಥಿಗಳು ಸಾಗಿದರು. ಇದೇ ವೇಳೆ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು. ಶುಶ್ರೂಷಕರ ಸೇವೆ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು.</p>.<p>ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ‘ಮುಂದಿನ ವರ್ಷ ರ್ಯಾಲಿಯನ್ನು ಮತ್ತಷ್ಟು ಬೃಹತ್ ಪ್ರಮಾಣದಲ್ಲಿ ಆಯೋಜಿಸಬೇಕು’ ಎಂದು ಕರೆ ನೀಡಿದರು.</p>.<p>‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಪ್ರಾಯೋಗಿಕ ಜ್ಞಾನ ಸಿಗಬೇಕು. ಕೋವಿಡ್ ಸಂದರ್ಭದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಶುಶ್ರೂಷಕರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡಿದ್ದರು. ಅವರ ಸೇವೆ ಸ್ಮರಣೀಯ’ ಎಂದು ಹೇಳಿದರು.</p>.<p>‘ವಿದೇಶಗಳಲ್ಲೂ ಭಾರತೀಯ ನರ್ಸ್ಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ವಿದೇಶದಲ್ಲಿ ಭಾರತೀಯ ಶಶ್ರೂಷಕರಿಗೆ ಬೇಡಿಕೆಯಿದೆ’ ಎಂದು ಹೇಳಿದರು. ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಸಮಿತಿ, ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ಕಾಲೇಜಿಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ರ್ಯಾಲಿಗೆ ಗಣ್ಯರು ಚಾಲನೆ ನೀಡಿದರು.</p>.<p>ವಿಧಾನಸೌಧದ ಮುಂಭಾಗದಿಂದ ಆರಂಭವಾದ ರ್ಯಾಲಿಯು, ಮಿಲ್ಲರ್ಸ್ ರಸ್ತೆಯ ಮೂಲಕ ಸಾಗಿ ಸೇಂಟ್ ಆನ್ಸ್ ಶಾಲೆಯ ಎದುರು ಮುಕ್ತಾಯಗೊಂಡಿತು. ‘ನಮ್ಮ ನರ್ಸ್ಗಳು; ನಮ್ಮ ಭವಿಷ್ಯ’ ಎಂಬ ಭಿತ್ತಿಪತ್ರ ಹಿಡಿದು ನರ್ಸಿಂಗ್ ವಿದ್ಯಾರ್ಥಿಗಳು ಸಾಗಿದರು. ಇದೇ ವೇಳೆ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು. ಶುಶ್ರೂಷಕರ ಸೇವೆ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು.</p>.<p>ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ‘ಮುಂದಿನ ವರ್ಷ ರ್ಯಾಲಿಯನ್ನು ಮತ್ತಷ್ಟು ಬೃಹತ್ ಪ್ರಮಾಣದಲ್ಲಿ ಆಯೋಜಿಸಬೇಕು’ ಎಂದು ಕರೆ ನೀಡಿದರು.</p>.<p>‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಪ್ರಾಯೋಗಿಕ ಜ್ಞಾನ ಸಿಗಬೇಕು. ಕೋವಿಡ್ ಸಂದರ್ಭದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಶುಶ್ರೂಷಕರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡಿದ್ದರು. ಅವರ ಸೇವೆ ಸ್ಮರಣೀಯ’ ಎಂದು ಹೇಳಿದರು.</p>.<p>‘ವಿದೇಶಗಳಲ್ಲೂ ಭಾರತೀಯ ನರ್ಸ್ಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ವಿದೇಶದಲ್ಲಿ ಭಾರತೀಯ ಶಶ್ರೂಷಕರಿಗೆ ಬೇಡಿಕೆಯಿದೆ’ ಎಂದು ಹೇಳಿದರು. ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>