<p><strong>ಬೆಂಗಳೂರು</strong>: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (ಎನ್ಡಬ್ಲ್ಯುಕೆಆರ್ಟಿಸಿ) ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಎನ್ಡಬ್ಲ್ಯುಕೆಆರ್ಟಿಸಿಗೆ 1000 ಚಾಲಕರು ಮತ್ತು ಚಾಲಕ ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಎನ್ಡಬ್ಲ್ಯುಕೆಆರ್ಟಿಸಿ ಅಧ್ಯಕ್ಷ ಭರಮಗೌಡ ಕಾಗೆ ಮಾತನಾಡಿ, ‘ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಯ ಅವಶ್ಯಕತೆ ಇದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ಸರ್ಕಾರದಿಂದ ವಿಶೇಷ ಅನುದಾನ ಅಗತ್ಯ’ ಎಂದು ತಿಳಿಸಿದರು.</p>.<p>ಎನ್ಡಬ್ಲ್ಯುಕೆಆರ್ಟಿಸಿ ಪ್ರಿಯಾಂಗಾ ಎಂ., ಉಪಾಧ್ಯಕ್ಷ ಪೀರ್ಸಾಬ್ ಕೌತಾಳ, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (ಎನ್ಡಬ್ಲ್ಯುಕೆಆರ್ಟಿಸಿ) ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಎನ್ಡಬ್ಲ್ಯುಕೆಆರ್ಟಿಸಿಗೆ 1000 ಚಾಲಕರು ಮತ್ತು ಚಾಲಕ ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಎನ್ಡಬ್ಲ್ಯುಕೆಆರ್ಟಿಸಿ ಅಧ್ಯಕ್ಷ ಭರಮಗೌಡ ಕಾಗೆ ಮಾತನಾಡಿ, ‘ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಯ ಅವಶ್ಯಕತೆ ಇದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ಸರ್ಕಾರದಿಂದ ವಿಶೇಷ ಅನುದಾನ ಅಗತ್ಯ’ ಎಂದು ತಿಳಿಸಿದರು.</p>.<p>ಎನ್ಡಬ್ಲ್ಯುಕೆಆರ್ಟಿಸಿ ಪ್ರಿಯಾಂಗಾ ಎಂ., ಉಪಾಧ್ಯಕ್ಷ ಪೀರ್ಸಾಬ್ ಕೌತಾಳ, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>