ಹಿಂದೂ ಮೂಲಭೂತವಾದದ ಪುರೋಹಿತಶಾಹಿ ವ್ಯವಸ್ಥೆಯನ್ನು ಬೇರೂರಿಸಲು ಶಿಕ್ಷಣ ಕ್ಷೇತ್ರವನ್ನು ‘ಸಂವಹನಾ’ ಕೇಂದ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಸರ್ಕಾರ, ಕೇಂದ್ರ– ರಾಜ್ಯಗಳ ಪಠ್ಯ ಪುಸ್ತಕ ಪರಿಷ್ಕರಣೆ ಚೌಕಟ್ಟಗಳನ್ನು ಪಾಲಿಸಿಲ್ಲ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ರೋಹಿತ್ ಚಕ್ರತೀರ್ಥರ ಮೂಲಕ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತಿರುವುದು ಕೋಮುವಾದಿ ಹಿತಾಸಕ್ತಿಯನ್ನು ತೋರಿಸುತ್ತದೆ ಎಂದು ಟೀಕಿಸಿದೆ.