ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾದಿಂದ ಗಾಂಜಾ ತಂದು ಮಾರಾಟ

Last Updated 9 ಮೇ 2022, 18:58 IST
ಅಕ್ಷರ ಗಾತ್ರ

ಬೆಂಗಳೂರು: ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಶ್ಯಾಮಾನಂದ್ ದಿಗಲ್ (34) ಎಂಬಾತನನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದಾರೆ.

‘ಒಡಿಶಾದ ಶ್ಯಾಮಾನಂದ್, ಮೇ 5ರಂದು ನಗರಕ್ಕೆ ಬಂದಿದ್ದ. ಕುಮಾರಪಾರ್ಕ್‌ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಗಾಂಜಾ ಮಾರುತ್ತಿದ್ದ. ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ. 20 ಕೆ.ಜಿ ಗಾಂಜಾ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಒಡಿಶಾದಲ್ಲಿ ಬೆಳೆದ ಗಾಂಜಾವನ್ನು ನಗರಕ್ಕೆ ತರುತ್ತಿದ್ದ ಆರೋಪಿ, ಇಲ್ಲಿಯ ಗ್ರಾಹಕರಿಗೆ ಮಾರಿ ಹಣ ಸಂಪಾದಿಸಿಕೊಂಡು ವಾಪಸು ಹೋಗುತ್ತಿದ್ದ. ಈ ಬಾರಿ ನಮಗೆ ಸಿಕ್ಕಿಬಿದ್ದಿದ್ದಾನೆ. ಈತನ ಹಿನ್ನೆಲೆ ಹಾಗೂ ಇತರೆ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT