ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಡಿಶಾ ಪ್ರವಾಸೋದ್ಯಮ ಸಚಿವ ಜ್ಯೋತಿಪ್ರಕಾಶ್ ಪಾಣಿಗ್ರಾಹಿ, ‘ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಒಡಿಶಾ ₹500 ಕೋಟಿ ವಿನಿಯೋಗಿಸುತ್ತಿದೆ. ಕಾಶ್ಮೀರಕ್ಕಿಂತ ಸುಂದರವಾಗಿರುವ ನಮ್ಮ ರಾಜ್ಯದಲ್ಲಿರುವ ಅವಕಾಶಗಳನ್ನು ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳ ಹೂಡಿಕೆದಾರರು ಬಳಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.