ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ಅಮಾನತು

Last Updated 23 ಮಾರ್ಚ್ 2020, 3:27 IST
ಅಕ್ಷರ ಗಾತ್ರ

ಬೆಂಗಳೂರು: ಅರ್ಹತೆ ಇಲ್ಲದ ಶಿಕ್ಷಕರನ್ನು ವಿಧಾನ ಪರಿಷತ್‌ ಶಿಕ್ಷಣ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದ್ದಕ್ಕೆ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.

ಆನೇಕಲ್‌ ತಾಲ್ಲೂಕಿನ ಅರ್ಹತೆ ಇಲ್ಲದ 190 ಶಿಕ್ಷಕರ ಹೆಸರನ್ನು ತಹಶೀಲ್ದಾರ್‌ ದಿನೇಶ್‌ ಅವರು ಮತದಾರರ ಪಟ್ಟಿಯಲ್ಲಿ ಸೇರಿಸಿದ್ದರು. ಅದೇ ರೀತಿ, ರಾಜರಾಜೇಶ್ವರಿ ನಗರ ಉಪವಲಯದ ಬಿಬಿಎಂಪಿ ಕಂದಾಯ ಅಧಿಕಾರಿ ವೈ. ಬೈರೇಗೌಡ ಅವರು, 187 ಅನರ್ಹ ಮತದಾರರನ್ನು ಪಟ್ಟಿಗೆ ಸೇರಿಸಿದ್ದರು. ಹೀಗೆ, ಕರ್ತವ್ಯಲೋಪ ಎಸಗಿರುವ ಆರೋಪದಲ್ಲಿ ಈ ಇಬ್ಬರು ಅಧಿಕಾರಿಗಳನ್ನು ಪ್ರಾದೇಶಿಕ ಆಯುಕ್ತ ಇ.ಪಿ. ಇಕ್ಕೇರಿ ಅಮಾನತು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT