ಕರ್ನಾಟಕ ಮಾಧ್ಯಮ ಅಕಾಡೆಮಿ ಬುಧವಾರ ಆಯೋಜಿಸಿದ್ದ, ‘ಮಾಧ್ಯಮ, ಆಡಳಿತ, ಅಭಿವೃದ್ಧಿ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಾಮಾನ್ಯ ಜನರು ತಮ್ಮ ಕಷ್ಟಗಳಿಗೆ ಪರಿಹಾರ ಪಡೆಯುವುದಕ್ಕಾಗಿಯೇ ಅಧಿಕಾರಿಗಳ ಬಳಿ ಬರುತ್ತಾರೆ. ಅವರ ಕಷ್ಟಕ್ಕೆ ಸ್ಪಂದಿಸುವುದು, ಅಹವಾಲುಗಳನ್ನು ಆಲಿಸುವುದೇ ಅಧಿಕಾರಿಯ ಮೊದಲ ಕರ್ತವ್ಯ’ ಎಂದರು.