‘ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿಯಿಂದಾಗಿ ಶಿಕ್ಷಕರಿಗೂ ತೊಂದರೆಯಾಗಿದೆ. ಶೇ20ಕ್ಕಿಂತ ಅಧಿಕ ಪ್ರಮಾಣದಲ್ಲಿ ಖಾಲಿ ಇರುವ ತಾಲ್ಲೂಕುಗಳಿಗೆ ಮಾತ್ರ ವರ್ಗಾವಣೆ ಎಂಬ ನಿಮಮ ಸಡಿಲಿಸಿದರೆ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತವೆ. ಅದನ್ನು ಜಾರಿಗೆ ತಂದುಈಗಾಗಲೇ ನಡೆದಿರುವ ವರ್ಗಾವಣೆಯ ಪ್ರಕ್ರಿಯೆ ಮುಂದುವರಿಸಲು ಒತ್ತಾಯಿಸಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಿದ್ದೇವೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.