ಇದರಿಂದಾಗಿ ಮೇಲ್ಸೇತುವೆ, ಡೌನ್ ರ್ಯಾಂಪ್ ಹಾಗೂ ನಾಗವಾರ– ಬಿಇಎಲ್ ವೃತ್ತದ ರಸ್ತೆಯಲ್ಲಿ ತೈಲ ಚೆಲ್ಲಿತ್ತು. ಇದೇ ಮಾರ್ಗವಾಗಿ ಅತೀ ವೇಗದಲ್ಲಿ ಹೊರಟಿದ್ದ ಸವಾರರು, ದ್ವಿಚಕ್ರ ವಾಹನಗಳ ಸಮೇತ ರಸ್ತೆಯಲ್ಲಿ ಉರುಳಿಬಿದ್ದರು. ಅದನ್ನು ನೋಡಿದ ಉಳಿದ ಸವಾರರು, ದ್ವಿಚಕ್ರ ವಾಹನಗಳನ್ನು ನಿಧಾನಗತಿಯಲ್ಲಿ ಚಲಾಯಿಸಿಕೊಂಡು ಮುಂದಕ್ಕೆ ಹೋದರು.