ಗಮನ ಬೇರೆಡೆ ಸೆಳೆದು ಕೃತ್ಯ: ‘ಓಜಿಕುಪ್ಪಂ ತಂಡದ ಸದಸ್ಯನಾಗಿದ್ದ ರತ್ನಕುಮಾರ್, ಆಗಾಗ ಬೆಂಗಳೂರಿಗೆ ಬರುತ್ತಿದ್ದ. ಬ್ಯಾಂಕ್ಗೆ ಬಂದು ಹೋಗುತ್ತಿದ್ದ ಸಾರ್ವಜನಿಕರ ಮೇಲೆ ಕಣ್ಣಿಟ್ಟು, ಅವರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದವು’ ಎಂದೂ ತಿಳಿಸಿದರು.