<p>ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘವು ಇದೇ 31ರಂದು ಬೆಳಿಗ್ಗೆ 11 ಗಂಟೆಗೆಅರಮನೆ ಮೈದಾನದಲ್ಲಿ (ಗಾಯತ್ರಿ ವಿಹಾರ ಮತ್ತು ಗಾಯತ್ರಿ ವೃಕ್ಷ) ಸರ್ವಸದಸ್ಯರ ಸಭೆ ಮತ್ತು ವಿಶೇಷ ಸರ್ವ ಸದಸ್ಯರ ಸಭೆಯನ್ನು ಹಮ್ಮಿಕೊಂಡಿದೆ.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ್, ‘11 ವರ್ಷಗಳ ಬಳಿಕ ಸರ್ವಸದಸ್ಯರ ಸಭೆಯನ್ನು ಮಾಡಲಾಗುತ್ತಿದೆ. 2016ರ ನಂತರ ಕಾರಣಾಂತರಗಳಿಂದ ಸರ್ವಸದಸ್ಯರ ಸಭೆ ನಡೆದಿರಲಿಲ್ಲ. ಈಗ ನಮ್ಮ ಸಮಿತಿಯು ಆಡಳಿತ ವರದಿ ಮಂಡಿಸಲು ಸರ್ವಸದಸ್ಯರ ಸಭೆ ಕರೆದಿದೆ. ಅಂದು ಮಧ್ಯಾಹ್ನ 3 ಗಂಟೆಯ ಬಳಿಕ ವಿಶೇಷ ಸರ್ವಸದಸ್ಯರ ಸಭೆ ನಡೆಯಲಿದೆ. ಸಂಘದಲ್ಲಿ 6.5 ಲಕ್ಷ ಸದಸ್ಯರಿದ್ದು, ಅವರು ತಮ್ಮ ಗುರುತಿನ ಚೀಟಿಯೊಂದಿಗೆ ಸಭೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘದ ಗೌರವಾಧ್ಯಕ್ಷ ಕೆಂಚಪ್ಪಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಗಂಗಾಧರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-1395916437</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘವು ಇದೇ 31ರಂದು ಬೆಳಿಗ್ಗೆ 11 ಗಂಟೆಗೆಅರಮನೆ ಮೈದಾನದಲ್ಲಿ (ಗಾಯತ್ರಿ ವಿಹಾರ ಮತ್ತು ಗಾಯತ್ರಿ ವೃಕ್ಷ) ಸರ್ವಸದಸ್ಯರ ಸಭೆ ಮತ್ತು ವಿಶೇಷ ಸರ್ವ ಸದಸ್ಯರ ಸಭೆಯನ್ನು ಹಮ್ಮಿಕೊಂಡಿದೆ.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ್, ‘11 ವರ್ಷಗಳ ಬಳಿಕ ಸರ್ವಸದಸ್ಯರ ಸಭೆಯನ್ನು ಮಾಡಲಾಗುತ್ತಿದೆ. 2016ರ ನಂತರ ಕಾರಣಾಂತರಗಳಿಂದ ಸರ್ವಸದಸ್ಯರ ಸಭೆ ನಡೆದಿರಲಿಲ್ಲ. ಈಗ ನಮ್ಮ ಸಮಿತಿಯು ಆಡಳಿತ ವರದಿ ಮಂಡಿಸಲು ಸರ್ವಸದಸ್ಯರ ಸಭೆ ಕರೆದಿದೆ. ಅಂದು ಮಧ್ಯಾಹ್ನ 3 ಗಂಟೆಯ ಬಳಿಕ ವಿಶೇಷ ಸರ್ವಸದಸ್ಯರ ಸಭೆ ನಡೆಯಲಿದೆ. ಸಂಘದಲ್ಲಿ 6.5 ಲಕ್ಷ ಸದಸ್ಯರಿದ್ದು, ಅವರು ತಮ್ಮ ಗುರುತಿನ ಚೀಟಿಯೊಂದಿಗೆ ಸಭೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘದ ಗೌರವಾಧ್ಯಕ್ಷ ಕೆಂಚಪ್ಪಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಗಂಗಾಧರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-1395916437</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>