‘ವಿಶ್ವದಲ್ಲಿ ಬೆಂಗಳೂರಿನ ಮೂಲಕ ಭಾರತವನ್ನು ನೋಡಲಾಗುತ್ತಿದೆ. ಇಲ್ಲಿರುವ ಮಾನವ ಸಂಪನ್ಮೂಲ, ನವೋದ್ಯಮ, ಶಿಕ್ಷಣ, ಆರೋಗ್ಯ, ಪರಿಸರ ಎಲ್ಲರಿಗೂ ಆಕರ್ಷಣೆಯಾಗಿದೆ. ನಮ್ಮ ಸಮಾಜದವರಾದ ನಾಡಪ್ರಭು ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ ಅವರನ್ನು ಬೆಂಗಳೂರಿಗರು ಸದಾ ಸ್ಮರಿಸಿಕೊಳ್ಳಬೇಕು. ಬಾಲಗಂಗಾಧರನಾಥ ಸ್ವಾಮೀಜಿ ಸಮಾಜಕ್ಕೆ ರಾಜಕೀಯವಾಗಿ ಶಕ್ತಿ ತುಂಬಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಆ ಸ್ಥಾನ ತುಂಬಿದ್ದು, ಸಮಾಜವನ್ನು ಉತ್ತಮವಾಗಿ ರೂಪಿಸುವ ವಿಶ್ವಾಸ ನನಗಿದೆ’ ಎಂದರು.