‘ಎ.ಜೆ. ಸದಾಶಿವ ಆಯೋಗದ ವರದಿಯ ದೃಢೀಕೃತ ಪ್ರತಿಯನ್ನು 101 ಪರಿಶಿಷ್ಟ ಜಾತಿಗಳು, ಸಂಘಟನೆಗಳು ಮತ್ತು ಸಾರ್ವಜನಿಕರಿಗೆ ನೀಡಬೇಕು. ಬಾಧಿತ ಸಮುದಾಯಗಳ ಅಭಿಪ್ರಾಯ, ಲಿಖಿತ ಆಕ್ಷೇಪಣೆ, ತಕರಾರುಗಳನ್ನು ಸ್ವೀಕರಿಸಿ ಅಂತಹ ಸಮುದಾಯಗಳನ್ನು ವಿಚಾರಣೆಗೆ ಆಹ್ವಾನಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.