<p><strong>ಬೆಂಗಳೂರು</strong>: ಓಲಾ, ಉಬರ್ ಆಟೊಗಳ ಪ್ರಯಾಣ ದರ ನಿಗದಿ ಸಂಬಂಧ ನಾಗರಿಕ ಸಂಘಗಳೊಂದಿಗೆ ಮಂಗಳವಾರ ಸಭೆ ನಡೆಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಹೇಳಿದ್ದಾರೆ.</p>.<p>ಓಲಾ, ಉಬರ್, ಆಟೊ ಸಂಘಟನೆಗಳ ಜೊತೆ ಸೋಮವಾರ ನಡೆದ ಸಭೆಯ ನಂತರ ಅವರು ಮಾತನಾಡಿದರು.</p>.<p>‘ಓಲಾ, ಉಬರ್ ಪ್ರಯಾಣ ದರ ವಿಚಾರವಾಗಿ ಹೈಕೋರ್ಟ್ನಲ್ಲಿ ಪ್ರಕರಣವಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಸಭೆ ನಡೆಸಿದ್ದೇವೆ. ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆದು ಎಲ್ಲವನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಸಾರ್ವಜನಿಕವಾಗಿ ಯಾವುದೇ ನಿರ್ಧಾರ ತಿಳಿಸುವುದಿಲ್ಲ’ ಎಂದರು.</p>.<p>‘ಕನಿಷ್ಠ ದರವನ್ನು ₹30ರಿಂದ ₹40ಕ್ಕೆ ಏರಿಕೆ ಮಾಡಿ. ಓಲಾ, ಉಬರ್ ಲೂಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ. ನಮಗೆ ನ್ಯಾಯಯುತ ದರ ನಿಗದಿ ಮಾಡಿ’ ಎಂದು ಆಟೊ ಚಾಲಕರ ಸಂಘದ ಸದಸ್ಯರು ಸಭೆಯಲ್ಲಿ ಮನವಿ ಮಾಡಿದರು.</p>.<p>‘ಓಲಾ, ಉಬರ್ ತಂತ್ರಜ್ಞಾನ ಸೇವೆಗೆ ಸೀಮಿತವಾಗಿರಬೇಕು. ಶೇ 10 ಮಾತ್ರ ಹೆಚ್ಚು ದರ ತೆಗೆದುಕೊಳ್ಳುವಂತೆ ಮಾಡಿ. ನಿಮಗೆ ಪೂರ್ಣ ಪ್ರಮಾಣದ ಅಧಿಕಾರ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಓಲಾ, ಉಬರ್ ಆಟೊಗಳ ಪ್ರಯಾಣ ದರ ನಿಗದಿ ಸಂಬಂಧ ನಾಗರಿಕ ಸಂಘಗಳೊಂದಿಗೆ ಮಂಗಳವಾರ ಸಭೆ ನಡೆಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಹೇಳಿದ್ದಾರೆ.</p>.<p>ಓಲಾ, ಉಬರ್, ಆಟೊ ಸಂಘಟನೆಗಳ ಜೊತೆ ಸೋಮವಾರ ನಡೆದ ಸಭೆಯ ನಂತರ ಅವರು ಮಾತನಾಡಿದರು.</p>.<p>‘ಓಲಾ, ಉಬರ್ ಪ್ರಯಾಣ ದರ ವಿಚಾರವಾಗಿ ಹೈಕೋರ್ಟ್ನಲ್ಲಿ ಪ್ರಕರಣವಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಸಭೆ ನಡೆಸಿದ್ದೇವೆ. ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆದು ಎಲ್ಲವನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಸಾರ್ವಜನಿಕವಾಗಿ ಯಾವುದೇ ನಿರ್ಧಾರ ತಿಳಿಸುವುದಿಲ್ಲ’ ಎಂದರು.</p>.<p>‘ಕನಿಷ್ಠ ದರವನ್ನು ₹30ರಿಂದ ₹40ಕ್ಕೆ ಏರಿಕೆ ಮಾಡಿ. ಓಲಾ, ಉಬರ್ ಲೂಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ. ನಮಗೆ ನ್ಯಾಯಯುತ ದರ ನಿಗದಿ ಮಾಡಿ’ ಎಂದು ಆಟೊ ಚಾಲಕರ ಸಂಘದ ಸದಸ್ಯರು ಸಭೆಯಲ್ಲಿ ಮನವಿ ಮಾಡಿದರು.</p>.<p>‘ಓಲಾ, ಉಬರ್ ತಂತ್ರಜ್ಞಾನ ಸೇವೆಗೆ ಸೀಮಿತವಾಗಿರಬೇಕು. ಶೇ 10 ಮಾತ್ರ ಹೆಚ್ಚು ದರ ತೆಗೆದುಕೊಳ್ಳುವಂತೆ ಮಾಡಿ. ನಿಮಗೆ ಪೂರ್ಣ ಪ್ರಮಾಣದ ಅಧಿಕಾರ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>