ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ರೊಂದಿಗೆ ಸಮಾಲೋಚನಾ ಸಭೆ ನಡೆಸಲಾಗಿದೆ. ಆದರೆ, ಒಮ್ಮತದ ನಿಲುವಿಗೆ ಬರಲಾಗಿಲ್ಲ. ಇದೇ 14 ಮತ್ತು 15ರಂದು ಸಂಚಾರಿ ಪೊಲೀಸರ ಜೊತೆ ಸಭೆ ನಡೆಸಲಾಗುತ್ತಿದೆ. ಇದಕ್ಕಾಗಿ 4 ವಾರ ಕಾಲಾ ವಕಾಶ ನೀಡಬೇಕು’ ಎಂದು ಕೋರಿದರು. ಏತನ್ಮಧ್ಯೆ, ಭಾರತ್ ಮೋಟಾರು ಸಾರಿಗೆ ಚಾಲಕರ ಸಂಘದ ಪರ ವಕೀಲ ಎನ್.ಪಿ. ಅಮೃತೇಶ್ ಹಾಜರಾಗಿ, ‘ಅರ್ಜಿ ಕುರಿತಂತೆ ನ್ಯಾಯಾಲಯ ನಿರ್ದೇಶನ ನೀಡಿತ್ತು. ಅದರಂತೆ ಸಾರಿಗೆ ಆಯುಕ್ತರು ಸಭೆ ಕರೆದಿದ್ದರು. ಆದರೆ, ಸಭೆಯಲ್ಲಿ ಓಲಾ, ಉಬರ್, ರೊಪ್ಪನ್ ಸರ್ವೀಸ್ ಸೇರಿದಂತೆ ಐವರು ಮಾತ್ರ ಭಾಗಿಯಾಗಿದ್ದರು. ಬೆಂಗಳೂರು ನಗರದಲ್ಲಿ 16 ಚಾಲಕ ಒಕ್ಕೂಟಗಳಿವೆ. ಸಮಾಲೋಚನಾ ಸಭೆಯಲ್ಲಿ ಸಾರ್ವಜನಿಕರನ್ನೂ ಭಾಗಿದಾರರನ್ನಾಗಿಸಬೇಕು. ಅದರಂತೆ ಅರ್ಜಿಯಲ್ಲಿ ತಮ್ಮ ಸಂಘವನ್ನು ಪ್ರತಿವಾದಿ ಮಾಡಬೇಕು’ ಎಂದು ಕೋರಿದರು.