<p><strong>ಬೆಂಗಳೂರು:</strong> ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಕತ್ತು ಹಿಸುಕಿ ವೃದ್ಧೆಯೊಬ್ಬರನ್ನು ಹತ್ಯೆ ಮಾಡಲಾಗಿದ್ದು, ಕೃತ್ಯದ ಬಳಿಕ ಚಿನ್ನಾಭರಣ ಸಮೇತ ಆರೋಪಿಗಳು ಪರಾರಿಯಾಗಿದ್ದಾರೆ.</p>.<p>‘ಆನೆಪಾಳ್ಯದ ನಿವಾಸಿ ದಿಲ್ಶಾನ್ ಬಾನು (62) ಕೊಲೆಯಾದವರು. ಮಗನ ಜೊತೆ ಅವರು ವಾಸವಿದ್ದರು. ಗುರುವಾರ ಬೆಳಿಗ್ಗೆ ಮಗ ಕೆಲಸಕ್ಕೆ ಹೋಗಿದ್ದ ವೇಳೆಯಲ್ಲೇ ಈ ಕೃತ್ಯ ನಡೆದಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮನೆಗೆ ನುಗ್ಗಿದ್ದ ಆರೋಪಿಗಳು, ದಿಲ್ಶಾನ್ ಬಾನು ಅವರ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ, ಅವರ ಮೈ ಮೇಲೆ ಹಾಗೂ ಮನೆಯಲ್ಲಿದ್ದ ಚಿನ್ನಾಭರಣ ತೆಗೆದುಕೊಂಡು ಸ್ಥಳದಿಂದ ಹೊರಟು ಹೋಗಿದ್ದಾರೆ.’</p>.<p>’ಟೆಂಪೊ ಚಾಲಕನಾಗಿದ್ದ ಮಗ, ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಿದ್ದರು. ಅವಾಗಲೇ ತಾಯಿ ಮೃತದೇಹ ಕಂಡಿತ್ತು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ವೃದ್ಧೆ ಒಬ್ಬರೇ ಮನೆಯಲ್ಲಿರುವುದನ್ನು ತಿಳಿದುಕೊಂಡು ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನವಿದೆ. ಮಗನ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಕತ್ತು ಹಿಸುಕಿ ವೃದ್ಧೆಯೊಬ್ಬರನ್ನು ಹತ್ಯೆ ಮಾಡಲಾಗಿದ್ದು, ಕೃತ್ಯದ ಬಳಿಕ ಚಿನ್ನಾಭರಣ ಸಮೇತ ಆರೋಪಿಗಳು ಪರಾರಿಯಾಗಿದ್ದಾರೆ.</p>.<p>‘ಆನೆಪಾಳ್ಯದ ನಿವಾಸಿ ದಿಲ್ಶಾನ್ ಬಾನು (62) ಕೊಲೆಯಾದವರು. ಮಗನ ಜೊತೆ ಅವರು ವಾಸವಿದ್ದರು. ಗುರುವಾರ ಬೆಳಿಗ್ಗೆ ಮಗ ಕೆಲಸಕ್ಕೆ ಹೋಗಿದ್ದ ವೇಳೆಯಲ್ಲೇ ಈ ಕೃತ್ಯ ನಡೆದಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮನೆಗೆ ನುಗ್ಗಿದ್ದ ಆರೋಪಿಗಳು, ದಿಲ್ಶಾನ್ ಬಾನು ಅವರ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ, ಅವರ ಮೈ ಮೇಲೆ ಹಾಗೂ ಮನೆಯಲ್ಲಿದ್ದ ಚಿನ್ನಾಭರಣ ತೆಗೆದುಕೊಂಡು ಸ್ಥಳದಿಂದ ಹೊರಟು ಹೋಗಿದ್ದಾರೆ.’</p>.<p>’ಟೆಂಪೊ ಚಾಲಕನಾಗಿದ್ದ ಮಗ, ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಿದ್ದರು. ಅವಾಗಲೇ ತಾಯಿ ಮೃತದೇಹ ಕಂಡಿತ್ತು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ವೃದ್ಧೆ ಒಬ್ಬರೇ ಮನೆಯಲ್ಲಿರುವುದನ್ನು ತಿಳಿದುಕೊಂಡು ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನವಿದೆ. ಮಗನ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>