ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮನ್ ದೇಶದ ವಿದ್ಯಾರ್ಥಿ ಆತ್ಮಹತ್ಯೆ

Last Updated 23 ಮೇ 2022, 19:50 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲೂರು ಠಾಣೆ ವ್ಯಾಪ್ತಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅಬ್ದುಲ್ ಅಜೀರ್ (22) ಎಂಬುವರು, ಕಾಲೇಜಿನ ವಸತಿಗೃಹದ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಓಮನ್ ದೇಶದ ಪ್ರಜೆಯಾಗಿದ್ದ ಅಬ್ದುಲ್, ಬಿ.ಸಿ.ಎ ವ್ಯಾಸಂಗಕ್ಕಾಗಿ ನಗರಕ್ಕೆ ಬಂದಿದ್ದರು. ಮೇ 21ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಿಗ್ಗೆ ವಿಷಯ ಗೊತ್ತಾಗಿದೆ. ಸ್ನೇಹಿತರ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಓದಲು ಕಷ್ಟವಾಗುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯವಿದೆ’ ಎಂಬುದಾಗಿ ಸ್ನೇಹಿತರ ಬಳಿ ಅಬ್ದುಲ್ ಹೇಳಿಕೊಂಡಿದ್ದರೆಂದು ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT