<p><strong>ಬೆಂಗಳೂರು:</strong> ಕರ್ನಾಟಕದಲ್ಲಿ ಇತಿಹಾಸ ನಿರ್ಮಾಣ ಮಾಡಿರುವ ಒನಕೆ ಓಬವ್ವನವರ ಸಾಧನೆ ಬಗ್ಗೆ ಇನ್ನಷ್ಟು ಬೆಳಕು ಚೆಲ್ಲಲ್ಲು ರಾಜ್ಯದಲ್ಲಿ ಒನಕೆ ಓಬವ್ವ ಅಧ್ಯಯನ ಪೀಠ ತೆರೆಯಬೇಕು ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದರು.</p>.<p>ಸಮತಾ ಸೈನಿಕ ದಳ ಆಯೋಜಿಸಿದ್ದ ದಿವಂಗತ ಪ್ರೊ.ಎ.ಡಿ.ಕೃಷ್ಣಯ್ಯ ಅವರು ಬರೆದಿರುವ ಒನಕೆ ಓಬವ್ವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಒನಕೆ ಓಬವ್ವನ ಮೊದಲ ಜಯಂತಿಯನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಿದ್ದೆವು. ಪೂಲನ್ ದೇವಿ ಅವರನ್ನು ಈ ಕಾರ್ಯಕ್ರಮಕ್ಕೆ ಕರೆಸಿದ್ದೆವು. ಸಾಧಕ ಮಹಿಳೆ ಓಬವ್ವ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯುವ ಅಗತ್ಯವಿದೆ. ಚಲವಾದಿ ಸಮುದಾಯ ಸಾಂಸ್ಕೃತಿಕವಾಗಿ ಸದಾ ನೆನಪಿಸಿಕೊಳ್ಳಬೇಕು’ ಎಂದರು.</p>.<p>ಪುಸ್ತಕ ಬಿಡುಗಡೆ ಮಾಡಿದ ಸಾಹಿತಿ ಬಿ.ಟಿ.ಲಲಿತಾನಾಯಕ್, ‘ಇತಿಹಾಸದಲ್ಲಿ ಮರೆಮಾಚಿರುವ ಅನೇಕ ಪ್ರಕರಣಗಳಿವೆ. ಮರೆತುಹೋಗಿರುವ ಇತಿಹಾಸವನ್ನು ಪುಸ್ತಕ ಪ್ರಕಟಿಸುವ ಮೂಲಕ ಹೊರಕ್ಕೆ ತಂದಿರುವುದು ಉತ್ತಮವಾದ ಕೆಲಸ’ ಎಂದು ಹೇಳಿದರು.</p>.<p>ಚಲವಾದಿ ಗುರುಪೀಠದ ಬಸವನಾಗಿ ದೇವ ಸ್ವಾಮೀಜಿ ಮಾತನಾಡಿ, ‘ಸಂವಿಧಾನಕ್ಕೆ ಗೌರವ ಕೊಡುವ ಕೆಲಸವಾದರೆ, ಇತಿಹಾಸವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಲು ಸಾಧ್ಯ’ ಎಂದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಎಂ.ಸುಮಿತ್ರಾ, ಎಫ್ಎಸ್ಎಲ್ ವಿಜ್ಞಾನಿ ಎಂ.ವಿ.ಸೌಮ್ಯಾ, ಜೀತ ವಿಮುಕ್ತ ಹೋರಾಟಗಾರ್ತಿ ಪೂರ್ಣಿಮಾ ಮಧುಕರ್, ತೃತೀಯ ಲಿಂಗಿ ಸಮುದಾಯದ ಪರ ಹೋರಾಟಗಾರ್ತಿ ಸವಿತಾ ಅವರಿಗೆ ಒನಕೆ ಓಬವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದಲ್ಲಿ ಇತಿಹಾಸ ನಿರ್ಮಾಣ ಮಾಡಿರುವ ಒನಕೆ ಓಬವ್ವನವರ ಸಾಧನೆ ಬಗ್ಗೆ ಇನ್ನಷ್ಟು ಬೆಳಕು ಚೆಲ್ಲಲ್ಲು ರಾಜ್ಯದಲ್ಲಿ ಒನಕೆ ಓಬವ್ವ ಅಧ್ಯಯನ ಪೀಠ ತೆರೆಯಬೇಕು ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದರು.</p>.<p>ಸಮತಾ ಸೈನಿಕ ದಳ ಆಯೋಜಿಸಿದ್ದ ದಿವಂಗತ ಪ್ರೊ.ಎ.ಡಿ.ಕೃಷ್ಣಯ್ಯ ಅವರು ಬರೆದಿರುವ ಒನಕೆ ಓಬವ್ವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಒನಕೆ ಓಬವ್ವನ ಮೊದಲ ಜಯಂತಿಯನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಿದ್ದೆವು. ಪೂಲನ್ ದೇವಿ ಅವರನ್ನು ಈ ಕಾರ್ಯಕ್ರಮಕ್ಕೆ ಕರೆಸಿದ್ದೆವು. ಸಾಧಕ ಮಹಿಳೆ ಓಬವ್ವ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯುವ ಅಗತ್ಯವಿದೆ. ಚಲವಾದಿ ಸಮುದಾಯ ಸಾಂಸ್ಕೃತಿಕವಾಗಿ ಸದಾ ನೆನಪಿಸಿಕೊಳ್ಳಬೇಕು’ ಎಂದರು.</p>.<p>ಪುಸ್ತಕ ಬಿಡುಗಡೆ ಮಾಡಿದ ಸಾಹಿತಿ ಬಿ.ಟಿ.ಲಲಿತಾನಾಯಕ್, ‘ಇತಿಹಾಸದಲ್ಲಿ ಮರೆಮಾಚಿರುವ ಅನೇಕ ಪ್ರಕರಣಗಳಿವೆ. ಮರೆತುಹೋಗಿರುವ ಇತಿಹಾಸವನ್ನು ಪುಸ್ತಕ ಪ್ರಕಟಿಸುವ ಮೂಲಕ ಹೊರಕ್ಕೆ ತಂದಿರುವುದು ಉತ್ತಮವಾದ ಕೆಲಸ’ ಎಂದು ಹೇಳಿದರು.</p>.<p>ಚಲವಾದಿ ಗುರುಪೀಠದ ಬಸವನಾಗಿ ದೇವ ಸ್ವಾಮೀಜಿ ಮಾತನಾಡಿ, ‘ಸಂವಿಧಾನಕ್ಕೆ ಗೌರವ ಕೊಡುವ ಕೆಲಸವಾದರೆ, ಇತಿಹಾಸವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಲು ಸಾಧ್ಯ’ ಎಂದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಎಂ.ಸುಮಿತ್ರಾ, ಎಫ್ಎಸ್ಎಲ್ ವಿಜ್ಞಾನಿ ಎಂ.ವಿ.ಸೌಮ್ಯಾ, ಜೀತ ವಿಮುಕ್ತ ಹೋರಾಟಗಾರ್ತಿ ಪೂರ್ಣಿಮಾ ಮಧುಕರ್, ತೃತೀಯ ಲಿಂಗಿ ಸಮುದಾಯದ ಪರ ಹೋರಾಟಗಾರ್ತಿ ಸವಿತಾ ಅವರಿಗೆ ಒನಕೆ ಓಬವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>