<p><strong>ಬೊಮ್ಮನಹಳ್ಳಿ</strong>:‘ಕೊರೊನಾ ಸೋಂಕಿತರ ನೆರವಿಗಾಗಿ ಬೊಮ್ಮನಹಳ್ಳಿ ವಲಯದ ಎಲ್ಲಾ ವಾರ್ಡುಗಳಿಗೆ ತಲಾ ಒಂದು ಆಂಬುಲೆನ್ಸ್ ನೀಡಲಾಗುವುದು’ ಎಂದು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.</p>.<p>ಈ ವಲಯದ ಕೊರೊನಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಸುರೇಶ್ಕುಮಾರ್, ವಲಯ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದರು.</p>.<p>‘ಕೋವಿಡ್ ಸೋಂಕಿತರ ಸಾವಿನ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸುವುದು ನಮ್ಮ ಆದ್ಯತೆಯ ಕೆಲಸ. ಇದಕ್ಕಾಗಿ ಸೋಂಕಿತರಿಗೆ ಆರಂಭದಲ್ಲೇ ಗುಣಮಟ್ಟದ ಚಿಕಿತ್ಸೆ ಸಿಗುವ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ಆತಂಕಪಡಬೇಕಿಲ್ಲ’ ಎಂದರು.</p>.<p>‘ಕೋವಿಡ್ ನಿರ್ವಹಣೆಗೆಪ್ರತಿ ವಾರ್ಡ್ನಲ್ಲಿ 30ರಿಂದ 40 ಸ್ವಯಂಸೇವಕರು ಸೇವೆಗೆ ಸಿಗಲಿದ್ದಾರೆ‘ ಎಂದರು.</p>.<p>ನಂತರ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಸರ್ಕಾರದ ಸೂಚನೆಯಂತೆ ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ</strong>:‘ಕೊರೊನಾ ಸೋಂಕಿತರ ನೆರವಿಗಾಗಿ ಬೊಮ್ಮನಹಳ್ಳಿ ವಲಯದ ಎಲ್ಲಾ ವಾರ್ಡುಗಳಿಗೆ ತಲಾ ಒಂದು ಆಂಬುಲೆನ್ಸ್ ನೀಡಲಾಗುವುದು’ ಎಂದು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.</p>.<p>ಈ ವಲಯದ ಕೊರೊನಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಸುರೇಶ್ಕುಮಾರ್, ವಲಯ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದರು.</p>.<p>‘ಕೋವಿಡ್ ಸೋಂಕಿತರ ಸಾವಿನ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸುವುದು ನಮ್ಮ ಆದ್ಯತೆಯ ಕೆಲಸ. ಇದಕ್ಕಾಗಿ ಸೋಂಕಿತರಿಗೆ ಆರಂಭದಲ್ಲೇ ಗುಣಮಟ್ಟದ ಚಿಕಿತ್ಸೆ ಸಿಗುವ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ಆತಂಕಪಡಬೇಕಿಲ್ಲ’ ಎಂದರು.</p>.<p>‘ಕೋವಿಡ್ ನಿರ್ವಹಣೆಗೆಪ್ರತಿ ವಾರ್ಡ್ನಲ್ಲಿ 30ರಿಂದ 40 ಸ್ವಯಂಸೇವಕರು ಸೇವೆಗೆ ಸಿಗಲಿದ್ದಾರೆ‘ ಎಂದರು.</p>.<p>ನಂತರ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಸರ್ಕಾರದ ಸೂಚನೆಯಂತೆ ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>