ಬೆಂಗಳೂರು: ಉಲ್ಲಾಳ ಕೆರೆಯ ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಅಗ್ರಹಾರ ದಾಸರಹಳ್ಳಿ ನಿವಾಸಿ ಲಿಖಿತ್ (22) ಮೃತ ಯುವಕ. ಮಲ್ಲತ್ತಹಳ್ಳಿ ನಿವಾಸಿ ಜ್ಞಾನೇಶ್ (23) ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಲಿಖಿತ್ ಬೈಕ್ ಚಲಾಯಿಸುತ್ತಿದ್ದರು. ಮುಂದೆ ಚಲಿಸುತ್ತಿದ್ದ ಟಿಪ್ಪರ್ ಅನ್ನು ಹಿಂದಿಕ್ಕುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ’ ಎಂದು ಪೊಲೀಸರು ಹೇಳಿದರು.