<p><strong>ಬೆಂಳೂರು</strong>: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ‘ಒಂದು ದೇಶ, ಒಂದು ಚುನಾವಣೆ’ ಎಂಬ ಪರಿಕಲ್ಪನೆ ಎಲ್ಲಿಂದ ಬಂತು? ಈ ಬಗ್ಗೆ ಸಾರ್ವಜನಿಕ ಚರ್ಚೆ ಅಗತ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ನಾಗರಿಕ ಹಕ್ಕು ರಕ್ಷಣಾ ದಿನದಲ್ಲಿ ಅವರು ಮಾತನಾಡಿದರು.</p>.<p>ವಿವಿಧ ಜಾತಿ, ಮತ, ಪಂಥಗಳನ್ನು ಹೊಂದಿರುವ ಬಹುತ್ವದ ದೇಶ ಭಾರತದಲ್ಲಿ ಅಸ್ಪೃಶ್ಯತೆ, ಅಸಮಾನತೆ, ಮೂಢನಂಬಿಕೆಗಳು ಇನ್ನೂ ಜೀವಂತವಾಗಿವೆ. ಹೀಗಿರುವಾಗ `ಒಂದು ದೇಶ ಒಂದು ಚುನಾವಣೆ` ಜಾರಿ ಕುರಿತು ಚಿಂತನೆ, ಚರ್ಚೆ ನಡೆಯಬೇಕು ಎಂದು ತಿಳಿಸಿದರು. </p>.<p>ರಾಜ್ಯ ಸರ್ಕಾರ ಒಳಮೀಸಲಾತಿ ಗಣತಿ ಆರಂಭಿಸಿದ್ದು, ದಲಿತರ ಪರ ಯೋಜನೆಗಳನ್ನು ರೂಪಿಸಲು ವೈಜ್ಞಾನಿಕ ದತ್ತಾಂಶಗಳು ಬೇಕಾಗುತ್ತವೆ. ಎಡ, ಬಲ ಬದಿಗಿಟ್ಟು ಎಲ್ಲರೂ ಏಕತೆ ಸಾಧಿಸಬೇಕು ಎಂದರು. <br /><br />‘ಆಪರೇಷನ್ ಸಿಂಧೂರ`ದಲ್ಲಿ ಮೇಲುಗೈ ಸಾಧಿಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಎಂದು ಎಲ್ಲರೂ ತಿಳಿದುಕೊಂಡಿದ್ದಾರೆ. ಆದರೆ, ವಾಸ್ತವಾಂಶದಲ್ಲಿ ಸಂವಿಧಾನದಿಂದಲೇ ಮೇಲುಗೈ ಸಾಧಿಸಿದ್ದು ಎಂಬುದು ತಿಳಿದಿರಲಿ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಪ್ರೊ.ಬಿ. ಕೃಷ್ಣಪ್ಪ ಅವರು ಹೋರಾಟದ ಶಕ್ತಿ ಆಗಿದ್ದರು. ಅವರ ವಿಚಾರಧಾರೆಗಳನ್ನು ಮೂಲೆ ಮೂಲೆಗೂ ಕೊಂಡೊಯ್ಯುವ ಕೆಲಸ ಮಾಡಬೇಕು ಎಂದರು.</p>.<p>ಚಿಂತಕ ನಟರಾಜ ಹುಳಿಯಾರ್ ಮಾತನಾಡಿ, ಒಳಮೀಸಲಾತಿಯ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಹೊಸ ತಲೆಮಾರು ಒಗ್ಗೂಡಿಸಲು ಕಾರ್ಯಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ಬಿ. ಕೃಷ್ಣಪ್ಪ ಅವರ ಪತ್ನಿ ಇಂದಿರಾ ಕೃಷ್ಣಪ್ಪ ಮಾತನಾಡಿ, ‘ಸಮಾಜದಲ್ಲಿರುವ ಕೋಮುದಳ್ಳುರಿ ತಡೆಯಬೇಕು, ಸಮಾನತೆಗಾಗಿ ಸಂಘಟಿತರಾಗಬೇಕು, ಎಲ್ಲ ವರ್ಗದವರನ್ನು ಸೇರಿಸಿಕೊಂಡು ಹೋರಾಟಗಳನ್ನು ರೂಪಿಸಬೇಕು’ ಎಂದು ಮನವಿ ಮಾಡಿದರು. </p>.<p>ಇದೇ ವೇಳೆ ಇಂದಿರಾ ಕೃಷ್ಣಪ್ಪ ಅವರ `ದಾರ್ಶನಿಕ ನಮ್ಮ ಮಾರ್ಗದರ್ಶಕ` ಹಾಗೂ ಆತ್ಮಾನಂದ ಅವರ `ನನ್ನೊಳಗಿನ ಅಪ್ಪ` ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. </p>.<p>ಡಿಎಸ್ಎಸ್ ಅಂಬೇಡ್ಕರ್ ವಾದ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಹಿರಿಯ ಅಧಿಕಾರಿ ವೆಂಕಟೇಶಯ್ಯ, ಸಾಹಿತಿಗಳಾದ ಸುಬ್ಬು ಹೊಲೆಯರ್, ವಸುಂಧರಾ ಭೂಪತಿ, ಹುಲಿಕುಂಟೆ ಮೂರ್ತಿ, ಅರಿವು ಶಿವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಳೂರು</strong>: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ‘ಒಂದು ದೇಶ, ಒಂದು ಚುನಾವಣೆ’ ಎಂಬ ಪರಿಕಲ್ಪನೆ ಎಲ್ಲಿಂದ ಬಂತು? ಈ ಬಗ್ಗೆ ಸಾರ್ವಜನಿಕ ಚರ್ಚೆ ಅಗತ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ನಾಗರಿಕ ಹಕ್ಕು ರಕ್ಷಣಾ ದಿನದಲ್ಲಿ ಅವರು ಮಾತನಾಡಿದರು.</p>.<p>ವಿವಿಧ ಜಾತಿ, ಮತ, ಪಂಥಗಳನ್ನು ಹೊಂದಿರುವ ಬಹುತ್ವದ ದೇಶ ಭಾರತದಲ್ಲಿ ಅಸ್ಪೃಶ್ಯತೆ, ಅಸಮಾನತೆ, ಮೂಢನಂಬಿಕೆಗಳು ಇನ್ನೂ ಜೀವಂತವಾಗಿವೆ. ಹೀಗಿರುವಾಗ `ಒಂದು ದೇಶ ಒಂದು ಚುನಾವಣೆ` ಜಾರಿ ಕುರಿತು ಚಿಂತನೆ, ಚರ್ಚೆ ನಡೆಯಬೇಕು ಎಂದು ತಿಳಿಸಿದರು. </p>.<p>ರಾಜ್ಯ ಸರ್ಕಾರ ಒಳಮೀಸಲಾತಿ ಗಣತಿ ಆರಂಭಿಸಿದ್ದು, ದಲಿತರ ಪರ ಯೋಜನೆಗಳನ್ನು ರೂಪಿಸಲು ವೈಜ್ಞಾನಿಕ ದತ್ತಾಂಶಗಳು ಬೇಕಾಗುತ್ತವೆ. ಎಡ, ಬಲ ಬದಿಗಿಟ್ಟು ಎಲ್ಲರೂ ಏಕತೆ ಸಾಧಿಸಬೇಕು ಎಂದರು. <br /><br />‘ಆಪರೇಷನ್ ಸಿಂಧೂರ`ದಲ್ಲಿ ಮೇಲುಗೈ ಸಾಧಿಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಎಂದು ಎಲ್ಲರೂ ತಿಳಿದುಕೊಂಡಿದ್ದಾರೆ. ಆದರೆ, ವಾಸ್ತವಾಂಶದಲ್ಲಿ ಸಂವಿಧಾನದಿಂದಲೇ ಮೇಲುಗೈ ಸಾಧಿಸಿದ್ದು ಎಂಬುದು ತಿಳಿದಿರಲಿ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಪ್ರೊ.ಬಿ. ಕೃಷ್ಣಪ್ಪ ಅವರು ಹೋರಾಟದ ಶಕ್ತಿ ಆಗಿದ್ದರು. ಅವರ ವಿಚಾರಧಾರೆಗಳನ್ನು ಮೂಲೆ ಮೂಲೆಗೂ ಕೊಂಡೊಯ್ಯುವ ಕೆಲಸ ಮಾಡಬೇಕು ಎಂದರು.</p>.<p>ಚಿಂತಕ ನಟರಾಜ ಹುಳಿಯಾರ್ ಮಾತನಾಡಿ, ಒಳಮೀಸಲಾತಿಯ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಹೊಸ ತಲೆಮಾರು ಒಗ್ಗೂಡಿಸಲು ಕಾರ್ಯಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ಬಿ. ಕೃಷ್ಣಪ್ಪ ಅವರ ಪತ್ನಿ ಇಂದಿರಾ ಕೃಷ್ಣಪ್ಪ ಮಾತನಾಡಿ, ‘ಸಮಾಜದಲ್ಲಿರುವ ಕೋಮುದಳ್ಳುರಿ ತಡೆಯಬೇಕು, ಸಮಾನತೆಗಾಗಿ ಸಂಘಟಿತರಾಗಬೇಕು, ಎಲ್ಲ ವರ್ಗದವರನ್ನು ಸೇರಿಸಿಕೊಂಡು ಹೋರಾಟಗಳನ್ನು ರೂಪಿಸಬೇಕು’ ಎಂದು ಮನವಿ ಮಾಡಿದರು. </p>.<p>ಇದೇ ವೇಳೆ ಇಂದಿರಾ ಕೃಷ್ಣಪ್ಪ ಅವರ `ದಾರ್ಶನಿಕ ನಮ್ಮ ಮಾರ್ಗದರ್ಶಕ` ಹಾಗೂ ಆತ್ಮಾನಂದ ಅವರ `ನನ್ನೊಳಗಿನ ಅಪ್ಪ` ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. </p>.<p>ಡಿಎಸ್ಎಸ್ ಅಂಬೇಡ್ಕರ್ ವಾದ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಹಿರಿಯ ಅಧಿಕಾರಿ ವೆಂಕಟೇಶಯ್ಯ, ಸಾಹಿತಿಗಳಾದ ಸುಬ್ಬು ಹೊಲೆಯರ್, ವಸುಂಧರಾ ಭೂಪತಿ, ಹುಲಿಕುಂಟೆ ಮೂರ್ತಿ, ಅರಿವು ಶಿವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>