<p><strong>ಬೆಂಗಳೂರು:</strong> ನಗರದಲ್ಲಿ ಒಂದು ವಾರದಿಂದ ಈರುಳ್ಳಿ ದರ ಗಣನೀಯ ಏರಿಕೆ ಕಂಡಿದ್ದು, ಪ್ರತಿ ಕೆ.ಜಿ.ಗೆ ₹100ರಿಂದ ₹110ರಂತೆ ಮಾರಾಟವಾಗುತ್ತಿದೆ.ದರ ಇಳಿಕೆಯಿಂದ ನಿಟ್ಟುಸಿರುಬಿಟ್ಟಿದ್ದ ಗ್ರಾಹಕರಿಗೆ ಈರುಳ್ಳಿ ಮತ್ತೆ ಜೇಬಿಗೆ ಕತ್ತರಿ ಹಾಕಿದೆ.</p>.<p>ದೇಶದೆಲ್ಲೆಡೆ ಈರುಳ್ಳಿ ಉತ್ಪಾದನೆ ಕಡಿಮೆಯಾಗಿದೆ. ಈಗ ಬೆಳೆದಿರುವ ಈರುಳ್ಳಿ ಮಾರುಕಟ್ಟೆಗೆ ಬರಲು ಕನಿಷ್ಠ ಎರಡು ತಿಂಗಳಾಗಬಹುದು. ಅಲ್ಲಿಯವರೆಗೆ ಈರುಳ್ಳಿ ದರ ₹100ರ ಆಸುಪಾಸಿನಲ್ಲೇ ಇರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.</p>.<p>‘ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಈರುಳ್ಳಿ ಬೆಳೆ ಹಾನಿಯಾಗಿ, ಬೆಲೆ ಏರಿಕೆಯಾಗಿದೆ. ದೇಶದ ಈರುಳ್ಳಿಗೆ ವಿದೇಶಗಳಲ್ಲೂ ಬೇಡಿಕೆ ಇದೆ. ಹೀಗಾಗಿ ಈರುಳ್ಳಿ ಹೆಚ್ಚು ರಫ್ತಾಗುತ್ತಿದೆ.ಇದರಿಂದ ಮಾರುಕಟ್ಟೆಗೆ ಅಗತ್ಯ ಪ್ರಮಾಣದ ಈರುಳ್ಳಿ ಪೂರೈಕೆಯಾಗುತ್ತಿಲ್ಲ’ ಎನ್ನುತ್ತಾರೆ ಕೆ.ಆರ್.ಮಾರುಕಟ್ಟೆಯ ತರಕಾರಿ ವ್ಯಾಪಾರಿ ಸತೀಶ್.</p>.<p class="Subhead">ನುಗ್ಗೇಕಾಯಿ ದರ ಹೆಚ್ಚಳ: ಕೆ.ಆರ್.ಮಾರುಕಟ್ಟೆಯಲ್ಲಿ ಪ್ರತಿ ನುಗ್ಗೇಕಾಯಿ ₹20ರಿಂದ ₹30ರಂತೆ ಮಾರಾಟ ಆಗುತ್ತಿದೆ. ಹಾಪ್ಕಾಮ್ಸ್ನಲ್ಲಿ ನುಗ್ಗೇಕಾಯಿ ದರ ಪ್ರತಿ ಕೆ.ಜಿ.ಗೆ ₹330ರಷ್ಟಿದೆ.</p>.<p class="Subhead"><em>'ಅಗತ್ಯ ಪ್ರಮಾಣದ ಈರುಳ್ಳಿ ದಾಸ್ತಾನು ಇಲ್ಲದ ಕಾರಣ ಬೆಲೆ ಹೆಚ್ಚಿದೆ. ಜನವರಿ ವೇಳೆಗೆ ದರ ಕಡಿಮೆಯಾಗಲಿದೆ.</em><br /><em>-ಪ್ರಸನ್ನ, ತರಕಾರಿ ಸಗಟು ಮಾರುಕಟ್ಟೆ ವರ್ತಕರ ಸಂಘದ ಸಹ ಕಾರ್ಯದರ್ಶಿ.</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಒಂದು ವಾರದಿಂದ ಈರುಳ್ಳಿ ದರ ಗಣನೀಯ ಏರಿಕೆ ಕಂಡಿದ್ದು, ಪ್ರತಿ ಕೆ.ಜಿ.ಗೆ ₹100ರಿಂದ ₹110ರಂತೆ ಮಾರಾಟವಾಗುತ್ತಿದೆ.ದರ ಇಳಿಕೆಯಿಂದ ನಿಟ್ಟುಸಿರುಬಿಟ್ಟಿದ್ದ ಗ್ರಾಹಕರಿಗೆ ಈರುಳ್ಳಿ ಮತ್ತೆ ಜೇಬಿಗೆ ಕತ್ತರಿ ಹಾಕಿದೆ.</p>.<p>ದೇಶದೆಲ್ಲೆಡೆ ಈರುಳ್ಳಿ ಉತ್ಪಾದನೆ ಕಡಿಮೆಯಾಗಿದೆ. ಈಗ ಬೆಳೆದಿರುವ ಈರುಳ್ಳಿ ಮಾರುಕಟ್ಟೆಗೆ ಬರಲು ಕನಿಷ್ಠ ಎರಡು ತಿಂಗಳಾಗಬಹುದು. ಅಲ್ಲಿಯವರೆಗೆ ಈರುಳ್ಳಿ ದರ ₹100ರ ಆಸುಪಾಸಿನಲ್ಲೇ ಇರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.</p>.<p>‘ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಈರುಳ್ಳಿ ಬೆಳೆ ಹಾನಿಯಾಗಿ, ಬೆಲೆ ಏರಿಕೆಯಾಗಿದೆ. ದೇಶದ ಈರುಳ್ಳಿಗೆ ವಿದೇಶಗಳಲ್ಲೂ ಬೇಡಿಕೆ ಇದೆ. ಹೀಗಾಗಿ ಈರುಳ್ಳಿ ಹೆಚ್ಚು ರಫ್ತಾಗುತ್ತಿದೆ.ಇದರಿಂದ ಮಾರುಕಟ್ಟೆಗೆ ಅಗತ್ಯ ಪ್ರಮಾಣದ ಈರುಳ್ಳಿ ಪೂರೈಕೆಯಾಗುತ್ತಿಲ್ಲ’ ಎನ್ನುತ್ತಾರೆ ಕೆ.ಆರ್.ಮಾರುಕಟ್ಟೆಯ ತರಕಾರಿ ವ್ಯಾಪಾರಿ ಸತೀಶ್.</p>.<p class="Subhead">ನುಗ್ಗೇಕಾಯಿ ದರ ಹೆಚ್ಚಳ: ಕೆ.ಆರ್.ಮಾರುಕಟ್ಟೆಯಲ್ಲಿ ಪ್ರತಿ ನುಗ್ಗೇಕಾಯಿ ₹20ರಿಂದ ₹30ರಂತೆ ಮಾರಾಟ ಆಗುತ್ತಿದೆ. ಹಾಪ್ಕಾಮ್ಸ್ನಲ್ಲಿ ನುಗ್ಗೇಕಾಯಿ ದರ ಪ್ರತಿ ಕೆ.ಜಿ.ಗೆ ₹330ರಷ್ಟಿದೆ.</p>.<p class="Subhead"><em>'ಅಗತ್ಯ ಪ್ರಮಾಣದ ಈರುಳ್ಳಿ ದಾಸ್ತಾನು ಇಲ್ಲದ ಕಾರಣ ಬೆಲೆ ಹೆಚ್ಚಿದೆ. ಜನವರಿ ವೇಳೆಗೆ ದರ ಕಡಿಮೆಯಾಗಲಿದೆ.</em><br /><em>-ಪ್ರಸನ್ನ, ತರಕಾರಿ ಸಗಟು ಮಾರುಕಟ್ಟೆ ವರ್ತಕರ ಸಂಘದ ಸಹ ಕಾರ್ಯದರ್ಶಿ.</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>