‘ದಕ್ಷಿಣ ಭಾರತದ ರಾಜ್ಯಗಳಲ್ಲಿ ಈರುಳ್ಳಿ ಹೆಚ್ಚಾಗಿ ಬೆಳೆಯುತ್ತಾರೆ. ಇಲ್ಲಿಂದ ದೇಶದ ವಿವಿಧೆಡೆಗೆ ಈರುಳ್ಳಿ ರವಾನೆಯಾಗುತ್ತದೆ. ರಾಜ್ಯದ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬೆಳೆಯುತ್ತಾರೆ. ಆದರೆ, ಇತ್ತೀಚೆಗೆ ಈ ಭಾಗದಲ್ಲಿ ಸಂಭವಿಸಿದ ನೆರೆಯಿಂದ ಬೆಳೆಗಳೆಲ್ಲಾ ಹಾಳಾಗಿವೆ. ಇದರಿಂದ ಈರುಳ್ಳಿ ಬೆಳೆಗೂ ಹಾನಿಯಾಗಿದ್ದು, ಮಾರುಕಟ್ಟೆಗೆ ಅಗತ್ಯ ಪ್ರಮಾಣದ ಈರುಳ್ಳಿ ಪೂರೈಕೆಯಾಗಿಲ್ಲ.