ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬೈನಲ್ಲಿ ಆನ್‍ಲೈನ್ ಮೂಲಕ ‘ದಸರಾ ಕ್ರೀಡೋತ್ಸವ’

Last Updated 3 ನವೆಂಬರ್ 2020, 18:50 IST
ಅಕ್ಷರ ಗಾತ್ರ

ಬೆಂಗಳೂರು: ನಾಡಹಬ್ಬ ದಸರಾ ಅಂಗವಾಗಿ ದುಬೈನ ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ’ಹೆಮ್ಮೆಯ ಕನ್ನಡಿಗರು ತಂಡ‘ವು ಈ ಬಾರಿಯ 'ದಸರಾ ಕ್ರೀಡೋತ್ಸವ'ವನ್ನು ಕೊರೊನಾ ಕಾರಣದಿಂದ ಆನ್‍ಲೈನ್ ಮೂಲಕ ಹಮ್ಮಿಕೊಂಡಿತ್ತು.

‘ಹೆಮ್ಮೆಯ ಕನ್ನಡಿಗರು ತಂಡ’ದ ಅಧ್ಯಕ್ಷ ಸುದೀಪ್ ದಾವಣಗೆರೆ, ‘ಈ ಕಾರ್ಯಕ್ರಮವನ್ನು ಕೊರೊನಾ ಸೇನಾನಿಗಳಿಗೆ ಅರ್ಪಿಸಲಾಯಿತು. ಅಂತರರಾಷ್ಟ್ರೀಯ ಕ್ರೀಡಾತಾರೆ ಮಾಲತಿ ಕೃಷ್ಣಮೂರ್ತಿ ಹೊಳ್ಳ, ವಾಲಿಬಾಲ್ ಪಟು ಇಮ್ತಿಯಾಜ್ ಅಹಮದ್ ಹಾಗೂ ಈಜುಗಾರ ಶ್ರೀಹರಿ ನಟರಾಜ್ ಅತಿಥಿಯಾಗಿ ಭಾಗವಹಿಸಿದ್ದರು’ ಎಂದು ವಿವರಿಸಿದರು.

‘ಸಮಾರೋಪದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಭಾಷಣ ಸ್ಪರ್ಧೆಯ ವಿಜೇತರಿಗೆ ಪದಕ ಮತ್ತು ಪ್ರಶಸ್ತಿ ವಿತರಿಸಲಾಯಿತು. ಕನ್ನಡ ನಾಡು-ನುಡಿ ಕುರಿತು ಕವಿಗೋಷ್ಠಿ, ರಂಗೋಲಿ ಸ್ಪರ್ಧೆ, ರಸಪ್ರಶ್ನೆ, ಅಂತ್ಯಾಕ್ಷರಿ ಸ್ಫರ್ಧೆಗಳನ್ನು ಆಯೋಜಿಸಿದ್ದೆವು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT