‘ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದಕ್ಕೆ ಉತ್ತರ ಕಂಡುಕೊಳ್ಳುವುದು ಸುಲಭದ ವಿಷಯವಲ್ಲ. ಮನೆಯಲ್ಲಿ ಹಾಗೂ ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ಕಾಂಪೋಸ್ಟ್ ತಯಾರಿಸುತ್ತಿರುವವರಿಗೆ ಉತ್ತೇಜನ ನೀಡಬೇಕಾದ ಅಗತ್ಯವಿದೆ. ಅದರ ಬದಲು ಬಿಬಿಎಂಪಿ ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದೆ. ಕಸವನ್ನು ಪಾಲಿಕೆಗೆ ಕಸ ನೀಡುವವರು ಹಾಗೂ ಕಾಂಪೋಸ್ಟ್ ತಯಾರಿಸುವವರಿಗೆ ಒಂದೇ ರೀತಿಯ ತೆರಿಗೆ ವಿಧಿಸುವುದು ಸರಿಯಲ್ಲ’ ಎಂದು ಅಶ್ವತ್ಥನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು.