ಬೆಂಗಳೂರು ವಿಶ್ವವಿದ್ಯಾಲಯ ಆಯೋಜಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಐದು ದಿನಗಳ ಆನ್ಲೈನ್ ಕಾರ್ಯಾಗಾರದ ಎರಡನೇ ದಿನ ‘ಶಿಕ್ಷಣದಲ್ಲಿ ಪಠ್ಯ ಹಾಗೂ ರಚನಾತ್ಮಕ ಸುಧಾರಣೆ’ ವಿಷಯದ ಸಂವಾದದಲ್ಲಿ ಮಾತನಾಡಿದ ಅವರು, ‘ಈ ನೀತಿ ಪ್ರೇರಿತ ಶಿಕ್ಷಣ ವ್ಯವಸ್ಥೆ, ವಿದ್ಯಾರ್ಥಿಗಳ ಜ್ಞಾನಾರ್ಜನೆ, ತರ್ಕಬದ್ಧ ಆಲೋಚನೆ ಮತ್ತು ಸಾಮಾಜಿಕವಾದ ನೈಪುಣ್ಯವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಹೊಸ ದಿಕ್ಕು ತೋರಿಸಲಿದೆ’ ಎಂದರು.