‘ಮುಂದಿನ ಸಚಿವ ಸಂಪುಟದಲ್ಲೇ ಜಾಗೃತ ದಳದ ರೂಪುರೇಷೆ ಕುರಿತು ಚರ್ಚಿಸಲಾಗುವುದು. ದಳದಲ್ಲಿ ಯಾರೆಲ್ಲಾ ಇರಬೇಕು ಎಂಬುದರ ಕುರಿತೂ ತೀರ್ಮಾನ ತೆಗೆದುಕೊಳ್ಳಲಾಗುವುದು. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ತೆರಿಗೆ ಇಲಾಖೆ ಅಧಿಕಾರಿಗಳನ್ನೂ ಈ ದಳಕ್ಕೆ ಸೇರಿಸಿಕೊಂಡು, ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಪಟಾಕಿ ತಯಾರಿಕೆ ಘಟಕಗಳಿಂದ ಮಾದರಿ ಸಂಗ್ರಹಿಸಿ ಪ್ರಯೋಗಾಲದಲ್ಲಿ ಪರಿಶೀಲಿಸಿ ಪಟಾಕಿ ರಾಸಾಯನಿಕಯುಕ್ತವೇ ಅಥವಾ ಹಸಿರು ಪಟಾಕಿಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಲಾಗುವುದು. ಬಳಿಕ ಕ್ರಮ ಕೈಗೊಳ್ಳಲಾಗುವುದು. ಜಾಗೃತ ದಳ ಉತ್ತಮವಾಗಿ ಕೆಲಸ ಮಾಡಿದರೆ, ಶೇ 80ರಷ್ಟು ನಿಷೇಧಿತ ಪಟಾಕಿ ಉತ್ಪಾದನೆ, ಮಾರಾಟ ನಿಯಂತ್ರಣಕ್ಕೆ ತರಲು ಸಾಧ್ಯವಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.