<p><strong>ಬೆಂಗಳೂರು:</strong> ‘ಮರಣ ಶಾಸನದಂತಿರುವ ಒಂಟಿ ಮನೆ ಯೋಜನೆ ರದ್ದು ಮಾಡಿ, ಬಡವರ ಪ್ರಾಣ ಉಳಿಸಿ’ ಎಂದು ರಾಜ್ಯ ಅಹಿಂದ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಜಿ. ಶ್ರೀನಿವಾಸ್ ಆಗ್ರಹಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2010ರಿಂದ ಇಲ್ಲಿಯವರೆಗೆ ಮೂರು ಸಾವಿರ ಫಲಾನುಭವಿಗಳು ಮೃತಪಟ್ಟಿದ್ದಾರೆ. ಜಿಬಿಎ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಬಿಎ ಅಸಹಕಾರದಿಂದಾಗಿ, ಸೂರು ನಿರ್ಮಿಸಿಕೊಳ್ಳಬೇಕು ಎಂಬ ಬಡವರ ಕನಸು ಸಮಾಧಿ ಸೇರಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ’ ಎಂದರು.</p>.<p>‘ಕನಸಿನ ಮನೆ ನಿರ್ಮಿಸಿಕೊಳ್ಳುವ ಆಕಾಂಕ್ಷೆಯಿಂದ ತಾವು ನೆಲಸಿದ್ದ ಜಾಗವನ್ನು ತೆರವುಗೊಳಿಸಿ ಬಾಡಿಗೆ ಮನೆಗಳು ಮತ್ತು ಶೆಡ್ಗಳಲ್ಲಿ ವಾಸವಿರುವವರ ಸ್ಥಿತಿ ಶೋಚನೀಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮರಣ ಶಾಸನದಂತಿರುವ ಒಂಟಿ ಮನೆ ಯೋಜನೆ ರದ್ದು ಮಾಡಿ, ಬಡವರ ಪ್ರಾಣ ಉಳಿಸಿ’ ಎಂದು ರಾಜ್ಯ ಅಹಿಂದ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಜಿ. ಶ್ರೀನಿವಾಸ್ ಆಗ್ರಹಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2010ರಿಂದ ಇಲ್ಲಿಯವರೆಗೆ ಮೂರು ಸಾವಿರ ಫಲಾನುಭವಿಗಳು ಮೃತಪಟ್ಟಿದ್ದಾರೆ. ಜಿಬಿಎ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಬಿಎ ಅಸಹಕಾರದಿಂದಾಗಿ, ಸೂರು ನಿರ್ಮಿಸಿಕೊಳ್ಳಬೇಕು ಎಂಬ ಬಡವರ ಕನಸು ಸಮಾಧಿ ಸೇರಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ’ ಎಂದರು.</p>.<p>‘ಕನಸಿನ ಮನೆ ನಿರ್ಮಿಸಿಕೊಳ್ಳುವ ಆಕಾಂಕ್ಷೆಯಿಂದ ತಾವು ನೆಲಸಿದ್ದ ಜಾಗವನ್ನು ತೆರವುಗೊಳಿಸಿ ಬಾಡಿಗೆ ಮನೆಗಳು ಮತ್ತು ಶೆಡ್ಗಳಲ್ಲಿ ವಾಸವಿರುವವರ ಸ್ಥಿತಿ ಶೋಚನೀಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>