<p><strong>ದಾಬಸ್ ಪೇಟೆ:</strong> ನೆಲಮಂಗಲ ತಾಲ್ಲೂಕಿನ ನರಸೀಪುರ ತೋಪಿನಲ್ಲಿ ನಿರ್ಮಾಣ ಮಾಡುತ್ತಿರುವ ಹಾಲು ಶಿತಲೀಕರಣ ಘಟಕ (ಬಿಎಂಸಿ) ಕಟ್ಟಡದ ಸಂಪ್ಗಳು ಬಾಯ್ತೆರೆದು ನಿಂತಿದ್ದು, ಅಪಾಯ ಆಹ್ವಾನಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಹಲವು ತಿಂಗಳಿಂದ ಎರಡು ಸಂಪುಗಳನ್ನು ಹೀಗೆಯೇ ಬಾಯ್ತೆರೆದು ಬಿಡಲಾಗಿದೆ. ಸಿಮೆಂಟ್ ಸಂಪ್ಗಳು ಇವಾಗಿದ್ದು, ನೀರು ಪಾಚಿ ಕಟ್ಟಿದೆ. ಅಕಸ್ಮಾತ್ ಯಾರಾದರೂ ಬಿದ್ದರೆ ಅನಾಹುತ ಸಂಭವಿಸುತ್ತದೆ ಎನ್ನುತ್ತಾರೆ ಸ್ಥಳೀಯರು.</p>.<p>’ಸ್ಥಳೀಯ ಆಡಳಿತವಾದ ಪಂಚಾಯಿತಿ ಕಚೇರಿ ಹಿಂಭಾಗದಲ್ಲಿಯೇ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿಯೇ ಅಂಚೆ ಕಚೇರಿ ಇದ್ದು, ವೃದ್ಧರು, ಅಂಗವಿಕಲರು, ವಿಧವೆಯರು ತಮ್ಮ ಮಾಸಾಶನ ಪಡೆಯುವುದಕ್ಕೆ ಬರುತ್ತಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಖಂಡಿತ’ ಅನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಮಾರುತಿ.</p>.<p>ಜನದಟ್ಟಣೆಯ ಪ್ರದೇಶದಲ್ಲಿ ಅನಾಹುತಕ್ಕೆ ಕಾರಣವಾಗುವ ಸಂಪ್ಗಳ ಬಾಯಿ ಮುಚ್ಚಲು ಸಂಬಂಧಿಸಿದವರು ಕೂಡಲೇ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ನೆಲಮಂಗಲ ತಾಲ್ಲೂಕಿನ ನರಸೀಪುರ ತೋಪಿನಲ್ಲಿ ನಿರ್ಮಾಣ ಮಾಡುತ್ತಿರುವ ಹಾಲು ಶಿತಲೀಕರಣ ಘಟಕ (ಬಿಎಂಸಿ) ಕಟ್ಟಡದ ಸಂಪ್ಗಳು ಬಾಯ್ತೆರೆದು ನಿಂತಿದ್ದು, ಅಪಾಯ ಆಹ್ವಾನಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಹಲವು ತಿಂಗಳಿಂದ ಎರಡು ಸಂಪುಗಳನ್ನು ಹೀಗೆಯೇ ಬಾಯ್ತೆರೆದು ಬಿಡಲಾಗಿದೆ. ಸಿಮೆಂಟ್ ಸಂಪ್ಗಳು ಇವಾಗಿದ್ದು, ನೀರು ಪಾಚಿ ಕಟ್ಟಿದೆ. ಅಕಸ್ಮಾತ್ ಯಾರಾದರೂ ಬಿದ್ದರೆ ಅನಾಹುತ ಸಂಭವಿಸುತ್ತದೆ ಎನ್ನುತ್ತಾರೆ ಸ್ಥಳೀಯರು.</p>.<p>’ಸ್ಥಳೀಯ ಆಡಳಿತವಾದ ಪಂಚಾಯಿತಿ ಕಚೇರಿ ಹಿಂಭಾಗದಲ್ಲಿಯೇ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿಯೇ ಅಂಚೆ ಕಚೇರಿ ಇದ್ದು, ವೃದ್ಧರು, ಅಂಗವಿಕಲರು, ವಿಧವೆಯರು ತಮ್ಮ ಮಾಸಾಶನ ಪಡೆಯುವುದಕ್ಕೆ ಬರುತ್ತಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಖಂಡಿತ’ ಅನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಮಾರುತಿ.</p>.<p>ಜನದಟ್ಟಣೆಯ ಪ್ರದೇಶದಲ್ಲಿ ಅನಾಹುತಕ್ಕೆ ಕಾರಣವಾಗುವ ಸಂಪ್ಗಳ ಬಾಯಿ ಮುಚ್ಚಲು ಸಂಬಂಧಿಸಿದವರು ಕೂಡಲೇ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>