<p><strong>ಬೆಂಗಳೂರು:</strong> ಕೃತಕ ಬುದ್ದಿಮತ್ತೆ, ಮಷಿನ್ ಲರ್ನಿಂಗ್, ಬಿಬಿಎ, ಬಿಸಿಎ, ಬಿ.ಕಾಂ ಕೋರ್ಸ್ಗಳ ಜೊತೆಗೆ ವಿದೇಶಿ ಭಾಷೆಗಳ ಕಲಿಕೆಗೂ ಅವಕಾಶ ಇದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯ ಕುಲಪತಿ ಲಿಂಗರಾಜ ಗಾಂಧಿ ಹೇಳಿದರು.</p>.<p>ಮಲ್ಲೇಶ್ವರ ಬಡಾವಣೆಯಲ್ಲಿರುವ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದರು.</p>.<p>ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ‘ಸ್ವಯಂ ಹಣಕಾಸು ನಿರ್ವಹಣೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜು ಜ್ಞಾನಾರ್ಜನೆಯ ಜೊತೆಗೆ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದ ಹಾದಿಯಲ್ಲಿ ಸಾಗುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಲಾ ವಿಭಾಗದ ಡೀನ್ ಜ್ಯೋತಿ ವೆಂಕಟೇಶ್ ವಾರ್ಷಿಕ ವರದಿ ಮಂಡಿಸಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಯು.ಟಿ.ಫರ್ಜಾನಾ ಮತ್ತು ಮಾಲಾ ಮೇರಿ ಮಾರ್ಟಿನಾ ಅವರನ್ನು ಸನ್ಮಾನಿಸಲಾಯಿತು. ಕುಲಸಚಿವರಾದ ಟಿ.ಜವರೇಗೌಡ, ಸಿ.ಎಸ್.ಆನಂದ ಕುಮಾರ್, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮೀ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃತಕ ಬುದ್ದಿಮತ್ತೆ, ಮಷಿನ್ ಲರ್ನಿಂಗ್, ಬಿಬಿಎ, ಬಿಸಿಎ, ಬಿ.ಕಾಂ ಕೋರ್ಸ್ಗಳ ಜೊತೆಗೆ ವಿದೇಶಿ ಭಾಷೆಗಳ ಕಲಿಕೆಗೂ ಅವಕಾಶ ಇದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯ ಕುಲಪತಿ ಲಿಂಗರಾಜ ಗಾಂಧಿ ಹೇಳಿದರು.</p>.<p>ಮಲ್ಲೇಶ್ವರ ಬಡಾವಣೆಯಲ್ಲಿರುವ ವಿಶ್ವವಿದ್ಯಾಲಯದ ಮಹಿಳಾ ಕಾಲೇಜಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದರು.</p>.<p>ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ‘ಸ್ವಯಂ ಹಣಕಾಸು ನಿರ್ವಹಣೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜು ಜ್ಞಾನಾರ್ಜನೆಯ ಜೊತೆಗೆ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದ ಹಾದಿಯಲ್ಲಿ ಸಾಗುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಲಾ ವಿಭಾಗದ ಡೀನ್ ಜ್ಯೋತಿ ವೆಂಕಟೇಶ್ ವಾರ್ಷಿಕ ವರದಿ ಮಂಡಿಸಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಯು.ಟಿ.ಫರ್ಜಾನಾ ಮತ್ತು ಮಾಲಾ ಮೇರಿ ಮಾರ್ಟಿನಾ ಅವರನ್ನು ಸನ್ಮಾನಿಸಲಾಯಿತು. ಕುಲಸಚಿವರಾದ ಟಿ.ಜವರೇಗೌಡ, ಸಿ.ಎಸ್.ಆನಂದ ಕುಮಾರ್, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮೀ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>