’ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದ ಮೇರೆಗೆ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಇದು ಶಿಕ್ಷಣದ ಮೇಲೆ ನಿರಂಕುಶ ಹಾಗೂ ಅಪ್ರಜಾತಾಂತ್ರಿಕ ದಾಳಿ. ಪಠ್ಯಕ್ರಮ ಕಡಿಮೆ ಮಾಡುವ ನೆಪದಲ್ಲಿ ಧರ್ಮ ನಿರಪೇಕ್ಷತೆ, ಒಕ್ಕೂಟ ವ್ಯವಸ್ಥೆ, ಪೌರತ್ವ, ರಾಷ್ಟ್ರೀಯವಾದದಂತಹ ಪ್ರಮುಖ ವಿಷಯಗಳನ್ನು ರಾಜ್ಯಶಾಸ್ತ್ರ, ಇತಿಹಾಸ, ಸಮಾಜಶಾಸ್ತ್ರ ಪಠ್ಯಕ್ರಮದಿಂದ ತೆಗೆದು ಹಾಕಿರುವುದು ಖಂಡನಾರ್ಹ. ಇದು ಬಿಜೆಪಿ, ಆರ್ಎಸ್ಎಸ್ಪ್ರತಿಪಾದಿಸುವ ರಾಷ್ಟ್ರತ್ವದ ಪರಿಕಲ್ಪನೆಗೆ ಪೂರಕವಾದ ನಿಲುವನ್ನು ವ್ಯಕ್ತಪಡಿಸುವಂತಿದೆ‘ ಎಂದು ದೂರಿದೆ.