<p><strong>ಬೆಂಗಳೂರು</strong>: ಮೆಟ್ರೊ ಪ್ರಯಾಣ ದರ ಏರಿಕೆ ವಿರೋಧಿಸಿ ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ನಿರ್ಮಾಣವಾಗಿರುವ ‘ನಮ್ಮ ಮೆಟ್ರೊ’ ಖಾಸಗಿ ಅಥವಾ ಕಾರ್ಪೊರೇಟ್ ಉದ್ದಿಮೆಯಲ್ಲ. ಲಾಭ, ನಷ್ಟದ ಲೆಕ್ಕಾಚಾರ ಮಾಡಿ, ಪ್ರಯಾಣ ದರ ಏರಿಕೆ ಮಾಡಬಾರದು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಎಸ್ಯುಸಿಐ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎನ್.ರವಿ ಮಾತನಾಡಿ, ‘ನಮ್ಮ ಮೆಟ್ರೊ’ಗಾಗಿ ಕೆಲವು ವರ್ಷಗಳಿಂದ ಜನರ ಮೇಲೆ ತೆರಿಗೆ ವಿಧಿಸಲಾಗಿದೆ. ಇದೀಗ, ಪ್ರಯಾಣ ದರ ಏರಿಸುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು.</p>.<p>ಮೆಟ್ರೊ ಪ್ರಯಾಣ ದರ ಹೆಚ್ಚಳದಿಂದ ಸಾಮಾನ್ಯ ಜನರಿಗೆ ತಿಂಗಳಿಗೆ ಸರಾಸರಿ ₹400 ರಿಂದ ₹450ರವರೆಗೆ ಹೆಚ್ಚಿನ ಹೊರೆಯಾಗುತ್ತದೆ. ಈಗಾಗಲೇ ಬಸ್ ದರ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಯಿಂದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ, ಮೆಟ್ರೊ ಪ್ರಯಾಣ ದರ ಏರಿಕೆ ಮಾಡದಂತೆ ತಡೆಯಬೇಕು’ ಎಂದು ಆಗ್ರಹಿಸಿದರು.</p>.<p>‘ನಮ್ಮ ಮೆಟ್ರೊ’ ಸಾರ್ವಜನಿಕ ಸಾರಿಗೆ. ಲಾಭ ಮತ್ತು ನಷ್ಟದ ಆಧಾರದ ಮೇಲೆ ಅದು ಕಾರ್ಯನಿರ್ವಹಿಸಬಾರದು. ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಕೈಗೆಟಕುವ ದರದಲ್ಲಿ ಸೇವೆಯನ್ನು ನೀಡುವುದೇ ನಮ್ಮ ಮೆಟ್ರೊ ಗುರಿಯಾಗಬೇಕು' ಎಂದು ಸಲಹೆ ನೀಡಿದರು.</p>.<p>ಎಸ್ಯುಸಿಐ(ಕಮ್ಯುನಿಸ್ಟ್) ಜಿಲ್ಲಾ ಸಮಿತಿ ಸದಸ್ಯ ಜಯಣ್ಣ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೆಟ್ರೊ ಪ್ರಯಾಣ ದರ ಏರಿಕೆ ವಿರೋಧಿಸಿ ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ನಿರ್ಮಾಣವಾಗಿರುವ ‘ನಮ್ಮ ಮೆಟ್ರೊ’ ಖಾಸಗಿ ಅಥವಾ ಕಾರ್ಪೊರೇಟ್ ಉದ್ದಿಮೆಯಲ್ಲ. ಲಾಭ, ನಷ್ಟದ ಲೆಕ್ಕಾಚಾರ ಮಾಡಿ, ಪ್ರಯಾಣ ದರ ಏರಿಕೆ ಮಾಡಬಾರದು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಎಸ್ಯುಸಿಐ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎನ್.ರವಿ ಮಾತನಾಡಿ, ‘ನಮ್ಮ ಮೆಟ್ರೊ’ಗಾಗಿ ಕೆಲವು ವರ್ಷಗಳಿಂದ ಜನರ ಮೇಲೆ ತೆರಿಗೆ ವಿಧಿಸಲಾಗಿದೆ. ಇದೀಗ, ಪ್ರಯಾಣ ದರ ಏರಿಸುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು.</p>.<p>ಮೆಟ್ರೊ ಪ್ರಯಾಣ ದರ ಹೆಚ್ಚಳದಿಂದ ಸಾಮಾನ್ಯ ಜನರಿಗೆ ತಿಂಗಳಿಗೆ ಸರಾಸರಿ ₹400 ರಿಂದ ₹450ರವರೆಗೆ ಹೆಚ್ಚಿನ ಹೊರೆಯಾಗುತ್ತದೆ. ಈಗಾಗಲೇ ಬಸ್ ದರ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಯಿಂದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ, ಮೆಟ್ರೊ ಪ್ರಯಾಣ ದರ ಏರಿಕೆ ಮಾಡದಂತೆ ತಡೆಯಬೇಕು’ ಎಂದು ಆಗ್ರಹಿಸಿದರು.</p>.<p>‘ನಮ್ಮ ಮೆಟ್ರೊ’ ಸಾರ್ವಜನಿಕ ಸಾರಿಗೆ. ಲಾಭ ಮತ್ತು ನಷ್ಟದ ಆಧಾರದ ಮೇಲೆ ಅದು ಕಾರ್ಯನಿರ್ವಹಿಸಬಾರದು. ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಕೈಗೆಟಕುವ ದರದಲ್ಲಿ ಸೇವೆಯನ್ನು ನೀಡುವುದೇ ನಮ್ಮ ಮೆಟ್ರೊ ಗುರಿಯಾಗಬೇಕು' ಎಂದು ಸಲಹೆ ನೀಡಿದರು.</p>.<p>ಎಸ್ಯುಸಿಐ(ಕಮ್ಯುನಿಸ್ಟ್) ಜಿಲ್ಲಾ ಸಮಿತಿ ಸದಸ್ಯ ಜಯಣ್ಣ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>