<p><strong>ಬೆಂಗಳೂರು</strong>: ಬೆಂಗಳೂರಿನಿಂದ ಕನಕಪುರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ( 948) ಯಲ್ಲಿನ ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಂದ ಶುಲ್ಕ ವಸೂಲು ಮಾಡಲಾಗುತ್ತಿದೆ ಎಂದು ರಾಜ್ಯ ರೈತ ಸಂಘ ಆರೋಪಿಸಿದೆ.</p>.<p>ಟೋಲ್ನಿಂದ 5 ಕಿ.ಮೀ. ಅಂತರದಲ್ಲಿರುವ ಸ್ಥಳೀಯರಿಂದ 60 ಕಿ.ಮೀ. ದೂರದ ಶುಲ್ಕವನ್ನೇ ವಸೂಲಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಸೋಮನಹಳ್ಳಿ ಟೋಲ್ ಗೇಟ್ಗೆ ಹೊಂದಿಕೊಂಡಿರುವ ಕಗ್ಗಲೀಪುರ, ಸೋಮನಹಳ್ಳಿ, ನೆಲಗುಳಿ, ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 15ಕ್ಕೂ ಹೆಚ್ಚು ಗ್ರಾಮಗಳಿದ್ದು, ಈ ಎಲ್ಲ ಗ್ರಾಮಸ್ಥರಿಗೆ ಕಗ್ಗಲೀಪುರ ಪ್ರಮುಖ ಕೇಂದ್ರವಾಗಿದೆ. ಗೂಡ್ಸ್ ವಾಹನಗಳೂ ಸೇರಿದಂತೆ ಸ್ಥಳೀಯರು ನಿತ್ಯದ ಕೆಲಸಕ್ಕಾಗಿ ಬೆಂಗಳೂರಿಗೆ ಬರುತ್ತಾರೆ. ಅವರಿಂದಲೂ ಟೋಲ್ ಪಡೆಯಲಾಗುತ್ತಿದ್ದು, ಹೊರೆಯಾಗಿ ಪರಿಣಮಿಸಿದೆ. <br><br>ಸುತ್ತಮುತ್ತಲಿನ ಗ್ರಾಮಗಳು ಟೋಲ್ ಗೇಟ್ನಿಂದ 5 ಕಿ.ಮೀ. ದೂರದಲ್ಲಿವೆ. ಆಸ್ಪತ್ರೆ, ಪೊಲೀಸ್ ಠಾಣೆ, ಬ್ಯಾಂಕ್ಗಳು, ಪೆಟ್ರೋಲ್ ಬಂಕ್, ಮಾರುಕಟ್ಟೆ ಇದೆ. ಈ ಭಾಗದ ಗ್ರಾಮಸ್ಥರು ನಿತ್ಯ ಕೆಲಸಕ್ಕಾಗಿ ಕಗ್ಗಲೀಪುರಕ್ಕೆ ಬರುತ್ತಾರೆ. ರೈತರು ತಾವು ಬೆಳೆದ ತರಕಾರಿಗಳನ್ನು ಮಾರಾಟ ಮಾಡಲು ಕಗ್ಗಲೀಪುರ ಇಲ್ಲವೇ ಬೆಂಗಳೂರು ಮಾರುಕಟ್ಟೆ ಅವಲಂಬಿಸಿದ್ದಾರೆ. ಆದರೀಗ, ಇವರು ಟೋಲ್ ಶುಲ್ಕ ಪಾವತಿಸಬೇಕಿದೆ. </p>.<p>‘ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡಬೇಕು. ಇಲ್ಲವೇ ಟೋಲ್ ಗೇಟ್ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಿಸಬೇಕು. ಇಲ್ಲವಾದರೆ ರಸ್ತೆ ಬಂದ್ ಮಾಡಲಾಗುವುದು’ ಎಂದು ರೈತ ಸಂಘದ ಸಲಹೆಗಾರ ಪ್ರಶಾಂತ್ ಹೊಸದುರ್ಗ ಎಚ್ಚರಿಸಿದ್ದಾರೆ.</p>.<p>‘ಸಮಸ್ಯೆಗಳ ಕುರಿತು ಚರ್ಚಿಸಲು ಗುರುವಾರ ಸುತ್ತಮುತ್ತಲ ಗ್ರಾಮಗಳ ಸಭೆ ಕರೆಯಲಾಗಿದೆ’ ಎಂದು ರೈತ ಸಂಘದ ಕಗ್ಗಲಿಪುರ ಕೇಂದ್ರದ ಅಧ್ಯಕ್ಷ ನದೀಮ್ ಪಾಷಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರಿನಿಂದ ಕನಕಪುರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ( 948) ಯಲ್ಲಿನ ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಂದ ಶುಲ್ಕ ವಸೂಲು ಮಾಡಲಾಗುತ್ತಿದೆ ಎಂದು ರಾಜ್ಯ ರೈತ ಸಂಘ ಆರೋಪಿಸಿದೆ.</p>.<p>ಟೋಲ್ನಿಂದ 5 ಕಿ.ಮೀ. ಅಂತರದಲ್ಲಿರುವ ಸ್ಥಳೀಯರಿಂದ 60 ಕಿ.ಮೀ. ದೂರದ ಶುಲ್ಕವನ್ನೇ ವಸೂಲಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಸೋಮನಹಳ್ಳಿ ಟೋಲ್ ಗೇಟ್ಗೆ ಹೊಂದಿಕೊಂಡಿರುವ ಕಗ್ಗಲೀಪುರ, ಸೋಮನಹಳ್ಳಿ, ನೆಲಗುಳಿ, ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 15ಕ್ಕೂ ಹೆಚ್ಚು ಗ್ರಾಮಗಳಿದ್ದು, ಈ ಎಲ್ಲ ಗ್ರಾಮಸ್ಥರಿಗೆ ಕಗ್ಗಲೀಪುರ ಪ್ರಮುಖ ಕೇಂದ್ರವಾಗಿದೆ. ಗೂಡ್ಸ್ ವಾಹನಗಳೂ ಸೇರಿದಂತೆ ಸ್ಥಳೀಯರು ನಿತ್ಯದ ಕೆಲಸಕ್ಕಾಗಿ ಬೆಂಗಳೂರಿಗೆ ಬರುತ್ತಾರೆ. ಅವರಿಂದಲೂ ಟೋಲ್ ಪಡೆಯಲಾಗುತ್ತಿದ್ದು, ಹೊರೆಯಾಗಿ ಪರಿಣಮಿಸಿದೆ. <br><br>ಸುತ್ತಮುತ್ತಲಿನ ಗ್ರಾಮಗಳು ಟೋಲ್ ಗೇಟ್ನಿಂದ 5 ಕಿ.ಮೀ. ದೂರದಲ್ಲಿವೆ. ಆಸ್ಪತ್ರೆ, ಪೊಲೀಸ್ ಠಾಣೆ, ಬ್ಯಾಂಕ್ಗಳು, ಪೆಟ್ರೋಲ್ ಬಂಕ್, ಮಾರುಕಟ್ಟೆ ಇದೆ. ಈ ಭಾಗದ ಗ್ರಾಮಸ್ಥರು ನಿತ್ಯ ಕೆಲಸಕ್ಕಾಗಿ ಕಗ್ಗಲೀಪುರಕ್ಕೆ ಬರುತ್ತಾರೆ. ರೈತರು ತಾವು ಬೆಳೆದ ತರಕಾರಿಗಳನ್ನು ಮಾರಾಟ ಮಾಡಲು ಕಗ್ಗಲೀಪುರ ಇಲ್ಲವೇ ಬೆಂಗಳೂರು ಮಾರುಕಟ್ಟೆ ಅವಲಂಬಿಸಿದ್ದಾರೆ. ಆದರೀಗ, ಇವರು ಟೋಲ್ ಶುಲ್ಕ ಪಾವತಿಸಬೇಕಿದೆ. </p>.<p>‘ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡಬೇಕು. ಇಲ್ಲವೇ ಟೋಲ್ ಗೇಟ್ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಿಸಬೇಕು. ಇಲ್ಲವಾದರೆ ರಸ್ತೆ ಬಂದ್ ಮಾಡಲಾಗುವುದು’ ಎಂದು ರೈತ ಸಂಘದ ಸಲಹೆಗಾರ ಪ್ರಶಾಂತ್ ಹೊಸದುರ್ಗ ಎಚ್ಚರಿಸಿದ್ದಾರೆ.</p>.<p>‘ಸಮಸ್ಯೆಗಳ ಕುರಿತು ಚರ್ಚಿಸಲು ಗುರುವಾರ ಸುತ್ತಮುತ್ತಲ ಗ್ರಾಮಗಳ ಸಭೆ ಕರೆಯಲಾಗಿದೆ’ ಎಂದು ರೈತ ಸಂಘದ ಕಗ್ಗಲಿಪುರ ಕೇಂದ್ರದ ಅಧ್ಯಕ್ಷ ನದೀಮ್ ಪಾಷಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>