<p><strong>ಬೆಂಗಳೂರು: </strong>‘ಕೊರೊನಾ ಸೋಂಕು ನಿಯಂತ್ರಿಸಲು ಘೋಷಿಸಲಾಗಿದ್ದ 70 ದಿನಗಳ ಲಾಕ್ಡೌನ್ ನಿಷ್ಪ್ರಯೋಜಕವಾದುದು. ರಾಜ್ಯದಲ್ಲಿ ಪ್ರತಿ ಸಂತ್ರಸ್ತ ಕುಟುಂಬಕ್ಕೆ ₹10 ಸಾವಿರ ನೆರವನ್ನಾದರೂ ಸರ್ಕಾರ ಘೋಷಿಸಬೇಕಿತ್ತು’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>‘ರಾಜ್ಯದಲ್ಲಿ ಕೋವಿಡ್ ನಿಯಂತ್ರಣ, ನಿರ್ವಹಣೆ, ಸಂತ್ರಸ್ತರಿಗೆ ಪರಿಹಾರ ಮತ್ತು ಆರ್ಥಿಕ ಪುನಶ್ಚೇತನ’ ಕುರಿತು ಸಿಪಿಐ (ಎಂ) ಬೆಂಗಳೂರು ಘಟಕ ಸೋಮವಾರ ಆಯೋಜಿಸಿದ್ದ ವಿರೋಧಪಕ್ಷಗಳ ನಾಯಕರ ಆನ್ಲೈನ್ ಸಂವಾದದಲ್ಲಿ ಮಾತನಾಡಿದ ಅವರು, ‘ಕೋವಿಡ್ ಪರಿಹಾರ ಕಾರ್ಯಗಳಿಗೆ ಕೇರಳ ಸರ್ಕಾರ ₹20 ಸಾವಿರ ಕೋಟಿ ಘೋಷಿಸಿದ್ದರೆ, ತೆಲಂಗಾಣ ₹35 ಸಾವಿರ ಕೋಟಿ ತೆಗೆದಿಟ್ಟಿದೆ. ರಾಜ್ಯ ಸರ್ಕಾರ ₹10 ಸಾವಿರ ಕೋಟಿ ಖರ್ಚು ಮಾಡಿದ್ದರೂ, ಸಂತ್ರಸ್ತರ ಪ್ರತಿ ಕುಟುಂಬಕ್ಕೆ ₹10 ಸಾವಿರ ನೀಡಬಹುದಾಗಿತ್ತು’ ಎಂದರು.</p>.<p>‘ನಗರಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದವರ ಪೈಕಿ 13 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಬಾದಾಮಿ ಕ್ಷೇತ್ರಕ್ಕೆ ಮರಳಿದ್ದಾರೆ. ಇವರಲ್ಲಿ 2 ಸಾವಿರ ಜನರಿಗೆ ಮಾತ್ರ ಉದ್ಯೋಗ ಖಾತ್ರಿಯಡಿ ಕೆಲಸ ನೀಡಲಾಗಿದೆ. ಆತ್ಮನಿರ್ಭರದ ಹೆಸರಲ್ಲಿ ಬಿಜೆಪಿಯವರು ದೇಶದ ಆತ್ಮವನ್ನೇ ಕೊಂದಿದ್ದಾರೆ’ ಎಂದು ದೂರಿದರು.</p>.<p>‘ತೆರಿಗೆ ಸಂಗ್ರಹ ಪ್ರಮಾಣ ಇಳಿದಿರುವ ಬಗ್ಗೆ, ವಲಸೆ ಕಾರ್ಮಿಕರ ಸಂಕಷ್ಟದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಅಂಕಿ–ಅಂಶ ಸಹಿತ ವರದಿಗಳು ಬರುತ್ತಿವೆ. ಇದನ್ನು ಓದಿಯಾದರೂ, ಕೇಂದ್ರ ಸರ್ಕಾರದ ದುರಾಡಳಿತವನ್ನು ಜನ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>ಸಿಪಿಐ ರಾಜ್ಯ ಕಾರ್ಯದರ್ಶಿ ಸಾಥಿ ಸುಂದರೇಶ್, ‘ಬೇರೆ ದೇಶಗಳಲ್ಲಿ ಡಿಸೆಂಬರ್ನಲ್ಲಿಯೇ ಕೊರೊನಾ ಸೋಂಕು ಹರಡಿತ್ತು. ವಿದೇಶದಿಂದ ಭಾರತಕ್ಕೆ ಬರುವವರನ್ನು ತಡೆಯುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿಲ್ಲ’ ಎಂದು ದೂರಿದರು.</p>.<p>ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲಾ, ‘ನಷ್ಟದ ನೆಪದಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಗಳನ್ನು ಮುಚ್ಚಲಾಗುತ್ತಿದ್ದು, ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಈ ಕಾರ್ಖಾನೆಗಳನ್ನು ಮುಚ್ಚಬಾರದು, ಮಹಿಳೆಯರಿಗೆ ಉದ್ಯೋಗ ಭದ್ರತೆ ನೀಡಬೇಕು ಎಂದು ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಮನವಿ ಮಾಡಿದರು.</p>.<p>ಸಿಪಿಐ (ಎಂ)ನ ರಾಜ್ಯ ಕಾರ್ಯದರ್ಶಿ ಯು. ಬಸವರಾಜು, ಬೆಂಗಳೂರು ಘಟಕದ ಕಾರ್ಯದರ್ಶಿ ಕೆ.ಎನ್. ಉಮೇಶ್, ಜಿ.ಎನ್. ನಾಗರಾಜ, ಮೀನಾಕ್ಷಿ ಸುಂದರಂ ಇದ್ದರು.</p>.<p><strong>‘ವಿಶೇಷ ಅಧಿವೇಶನ ಕರೆಯಿರಿ’</strong><br />‘ಲಾಕ್ಡೌನ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಈ ಕುರಿತು ಚರ್ಚಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು. ಕೊರೊನಾ ಕ್ರಮಗಳಿಗಾಗಿ ಮಾಡಿರುವ ವೆಚ್ಚ, ಕೋವಿಡ್–19 ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂದಿರುವ ಹಣದ ಕುರಿತು ಶ್ವೇತಪತ್ರ ಹೊರಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.</p>.<p>‘ಕಂತು ಕಟ್ಟುವ ದಿನವನ್ನು ಮುಂದೂಡಲಾಯಿತೆ ವಿನಾ ಬಡ್ಡಿ ಅಥವಾ ತೆರಿಗೆ ಮನ್ನಾ ಮಾಡುವಂತಹ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿಲ್ಲ. ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದವರ ಅಳಲು ಆಲಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ’ ಎಂದರು.</p>.<p>**<br />ಕೋವಿಡ್–19 ಪರಿಸ್ಥಿತಿ ನಿರ್ವಹಣೆಯಲ್ಲಿ ಕೇಂದ್ರ–ರಾಜ್ಯ ಸರ್ಕಾರ ವಿಫಲವಾಗಿವೆ. ಈ ಕುರಿತು ಚರ್ಚಿಸಲು ಸದ್ಯದಲ್ಲೇ ಎಲ್ಲ ವಿರೋಧಪಕ್ಷಗಳ ಸಭೆ ಕರೆಯಲಾಗುವುದು.<br /><em><strong>-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೊರೊನಾ ಸೋಂಕು ನಿಯಂತ್ರಿಸಲು ಘೋಷಿಸಲಾಗಿದ್ದ 70 ದಿನಗಳ ಲಾಕ್ಡೌನ್ ನಿಷ್ಪ್ರಯೋಜಕವಾದುದು. ರಾಜ್ಯದಲ್ಲಿ ಪ್ರತಿ ಸಂತ್ರಸ್ತ ಕುಟುಂಬಕ್ಕೆ ₹10 ಸಾವಿರ ನೆರವನ್ನಾದರೂ ಸರ್ಕಾರ ಘೋಷಿಸಬೇಕಿತ್ತು’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>‘ರಾಜ್ಯದಲ್ಲಿ ಕೋವಿಡ್ ನಿಯಂತ್ರಣ, ನಿರ್ವಹಣೆ, ಸಂತ್ರಸ್ತರಿಗೆ ಪರಿಹಾರ ಮತ್ತು ಆರ್ಥಿಕ ಪುನಶ್ಚೇತನ’ ಕುರಿತು ಸಿಪಿಐ (ಎಂ) ಬೆಂಗಳೂರು ಘಟಕ ಸೋಮವಾರ ಆಯೋಜಿಸಿದ್ದ ವಿರೋಧಪಕ್ಷಗಳ ನಾಯಕರ ಆನ್ಲೈನ್ ಸಂವಾದದಲ್ಲಿ ಮಾತನಾಡಿದ ಅವರು, ‘ಕೋವಿಡ್ ಪರಿಹಾರ ಕಾರ್ಯಗಳಿಗೆ ಕೇರಳ ಸರ್ಕಾರ ₹20 ಸಾವಿರ ಕೋಟಿ ಘೋಷಿಸಿದ್ದರೆ, ತೆಲಂಗಾಣ ₹35 ಸಾವಿರ ಕೋಟಿ ತೆಗೆದಿಟ್ಟಿದೆ. ರಾಜ್ಯ ಸರ್ಕಾರ ₹10 ಸಾವಿರ ಕೋಟಿ ಖರ್ಚು ಮಾಡಿದ್ದರೂ, ಸಂತ್ರಸ್ತರ ಪ್ರತಿ ಕುಟುಂಬಕ್ಕೆ ₹10 ಸಾವಿರ ನೀಡಬಹುದಾಗಿತ್ತು’ ಎಂದರು.</p>.<p>‘ನಗರಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದವರ ಪೈಕಿ 13 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಬಾದಾಮಿ ಕ್ಷೇತ್ರಕ್ಕೆ ಮರಳಿದ್ದಾರೆ. ಇವರಲ್ಲಿ 2 ಸಾವಿರ ಜನರಿಗೆ ಮಾತ್ರ ಉದ್ಯೋಗ ಖಾತ್ರಿಯಡಿ ಕೆಲಸ ನೀಡಲಾಗಿದೆ. ಆತ್ಮನಿರ್ಭರದ ಹೆಸರಲ್ಲಿ ಬಿಜೆಪಿಯವರು ದೇಶದ ಆತ್ಮವನ್ನೇ ಕೊಂದಿದ್ದಾರೆ’ ಎಂದು ದೂರಿದರು.</p>.<p>‘ತೆರಿಗೆ ಸಂಗ್ರಹ ಪ್ರಮಾಣ ಇಳಿದಿರುವ ಬಗ್ಗೆ, ವಲಸೆ ಕಾರ್ಮಿಕರ ಸಂಕಷ್ಟದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಅಂಕಿ–ಅಂಶ ಸಹಿತ ವರದಿಗಳು ಬರುತ್ತಿವೆ. ಇದನ್ನು ಓದಿಯಾದರೂ, ಕೇಂದ್ರ ಸರ್ಕಾರದ ದುರಾಡಳಿತವನ್ನು ಜನ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>ಸಿಪಿಐ ರಾಜ್ಯ ಕಾರ್ಯದರ್ಶಿ ಸಾಥಿ ಸುಂದರೇಶ್, ‘ಬೇರೆ ದೇಶಗಳಲ್ಲಿ ಡಿಸೆಂಬರ್ನಲ್ಲಿಯೇ ಕೊರೊನಾ ಸೋಂಕು ಹರಡಿತ್ತು. ವಿದೇಶದಿಂದ ಭಾರತಕ್ಕೆ ಬರುವವರನ್ನು ತಡೆಯುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿಲ್ಲ’ ಎಂದು ದೂರಿದರು.</p>.<p>ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲಾ, ‘ನಷ್ಟದ ನೆಪದಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಗಳನ್ನು ಮುಚ್ಚಲಾಗುತ್ತಿದ್ದು, ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಈ ಕಾರ್ಖಾನೆಗಳನ್ನು ಮುಚ್ಚಬಾರದು, ಮಹಿಳೆಯರಿಗೆ ಉದ್ಯೋಗ ಭದ್ರತೆ ನೀಡಬೇಕು ಎಂದು ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಮನವಿ ಮಾಡಿದರು.</p>.<p>ಸಿಪಿಐ (ಎಂ)ನ ರಾಜ್ಯ ಕಾರ್ಯದರ್ಶಿ ಯು. ಬಸವರಾಜು, ಬೆಂಗಳೂರು ಘಟಕದ ಕಾರ್ಯದರ್ಶಿ ಕೆ.ಎನ್. ಉಮೇಶ್, ಜಿ.ಎನ್. ನಾಗರಾಜ, ಮೀನಾಕ್ಷಿ ಸುಂದರಂ ಇದ್ದರು.</p>.<p><strong>‘ವಿಶೇಷ ಅಧಿವೇಶನ ಕರೆಯಿರಿ’</strong><br />‘ಲಾಕ್ಡೌನ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಈ ಕುರಿತು ಚರ್ಚಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು. ಕೊರೊನಾ ಕ್ರಮಗಳಿಗಾಗಿ ಮಾಡಿರುವ ವೆಚ್ಚ, ಕೋವಿಡ್–19 ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂದಿರುವ ಹಣದ ಕುರಿತು ಶ್ವೇತಪತ್ರ ಹೊರಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.</p>.<p>‘ಕಂತು ಕಟ್ಟುವ ದಿನವನ್ನು ಮುಂದೂಡಲಾಯಿತೆ ವಿನಾ ಬಡ್ಡಿ ಅಥವಾ ತೆರಿಗೆ ಮನ್ನಾ ಮಾಡುವಂತಹ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿಲ್ಲ. ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದವರ ಅಳಲು ಆಲಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ’ ಎಂದರು.</p>.<p>**<br />ಕೋವಿಡ್–19 ಪರಿಸ್ಥಿತಿ ನಿರ್ವಹಣೆಯಲ್ಲಿ ಕೇಂದ್ರ–ರಾಜ್ಯ ಸರ್ಕಾರ ವಿಫಲವಾಗಿವೆ. ಈ ಕುರಿತು ಚರ್ಚಿಸಲು ಸದ್ಯದಲ್ಲೇ ಎಲ್ಲ ವಿರೋಧಪಕ್ಷಗಳ ಸಭೆ ಕರೆಯಲಾಗುವುದು.<br /><em><strong>-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>