<p><strong>ಬೆಂಗಳೂರು</strong>: ವಸಂತನಗರದಲ್ಲಿರುವ ದಂಡು ಪ್ರದೇಶದ ಬಳಿಯ ರೈಲ್ವೆ ಕಾಲೊನಿಯಲ್ಲಿ ವಾಣಿಜ್ಯ ಕೇಂದ್ರ ಅಭಿವೃದ್ಧಿಗೆ 368 ಮರ ತೆರವುಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿರುವುದಕ್ಕೆ ಪರಿಸರ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.</p><p>‘ಬೆಂಗಳೂರಿನ ತಂಪು ವಾತಾವರಣಕ್ಕೆ ಕಾರಣವಾಗಿರುವ ಬೃಹತ್ ಮರಗಳು ನೂರಾರು ಪಕ್ಷಿಗಳಿಗೆ, ಸಾವಿರಾರು ಸೂಕ್ಷ್ಮ ಜೀವಿಗಳಿಗೆ ಆಶ್ರಯ ತಾಣವಾಗಿದೆ. ಈ ಮರಗಳನ್ನು ಕಡಿಯುವುದರಿಂದ ಈ ಪಕ್ಷಿಸಂಕುಲ ಮತ್ತು ಇತರ ಸೂಕ್ಷ್ಮ ಜೀವಿಗಳು ನೆಲೆ ಕಳೆದುಕೊಳ್ಳುತ್ತವೆ. ಬೆಂಗಳೂರಿನ ನಾಗರಿಕರಷ್ಟೇ ಅಲ್ಲದೇ ಪರಿಸರದ ಸಮತೋಲನದ ಪರವಾಗಿರುವವರೆಲ್ಲರೂ ಈ ಪರಿಸರ ವಿರೋಧಿ ಕ್ರಮವನ್ನು ಬಲವಾಗಿ ವಿರೋಧಿಸುತ್ತೇವೆ’ ಎಂದು ‘ಪರಿಸರಕ್ಕಾಗಿ ನಾವು ಸಂಘಟನೆ’ಯ ಸದಸ್ಯರು ಹೇಳಿದ್ದಾರೆ.</p><p>‘ಕಂಟೊನ್ಮೆಂಟ್ ರೈಲ್ವೇಸ್ ಕಾಲೊನಿ ಆವರಣದಲ್ಲಿ ‘ವಾಣಿಜ್ಯ ಅಭಿವೃದ್ಧಿ ಯೋಜನೆಗಾಗಿ‘ 368 ಮರಗಳನ್ನು ತೆರವುಗೊಳಿಸಲಾಗುತ್ತಿದೆ. ನಾಗರಿಕರು 10 ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಬಹುದು’ ಎಂದು ಬಿಬಿಎಂಪಿ ಅರಣ್ಯ ವಿಭಾಗ ಏ. 25ರಂದು ಪ್ರಕಟಣೆ ಹೊರಡಿಸಿದೆ.</p><p>‘ರೈಲು ಹಳಿ ಅಭಿವೃದ್ಧಿ ಹಾಗೂ ವಿಸ್ತರಣೆ ಕಾಮಗಾರಿಗಳಿಗಾಗಿ ಕಂಟೋನ್ಮೆಂಟ್ ರೈಲು ನಿಲ್ದಾಣ ಸುತ್ತಮತ್ತ ಮರಗಳನ್ನು ತೆರವು ಮಾಡಲು ಬಿಬಿಎಂಪಿಯಿಂದ ಅನುಮತಿ ಕೇಳಲಾಗಿದೆ. ತೆರವುಗೊಳಿಸಲಾಗುವ ಮರಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು’ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಸಂತನಗರದಲ್ಲಿರುವ ದಂಡು ಪ್ರದೇಶದ ಬಳಿಯ ರೈಲ್ವೆ ಕಾಲೊನಿಯಲ್ಲಿ ವಾಣಿಜ್ಯ ಕೇಂದ್ರ ಅಭಿವೃದ್ಧಿಗೆ 368 ಮರ ತೆರವುಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿರುವುದಕ್ಕೆ ಪರಿಸರ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.</p><p>‘ಬೆಂಗಳೂರಿನ ತಂಪು ವಾತಾವರಣಕ್ಕೆ ಕಾರಣವಾಗಿರುವ ಬೃಹತ್ ಮರಗಳು ನೂರಾರು ಪಕ್ಷಿಗಳಿಗೆ, ಸಾವಿರಾರು ಸೂಕ್ಷ್ಮ ಜೀವಿಗಳಿಗೆ ಆಶ್ರಯ ತಾಣವಾಗಿದೆ. ಈ ಮರಗಳನ್ನು ಕಡಿಯುವುದರಿಂದ ಈ ಪಕ್ಷಿಸಂಕುಲ ಮತ್ತು ಇತರ ಸೂಕ್ಷ್ಮ ಜೀವಿಗಳು ನೆಲೆ ಕಳೆದುಕೊಳ್ಳುತ್ತವೆ. ಬೆಂಗಳೂರಿನ ನಾಗರಿಕರಷ್ಟೇ ಅಲ್ಲದೇ ಪರಿಸರದ ಸಮತೋಲನದ ಪರವಾಗಿರುವವರೆಲ್ಲರೂ ಈ ಪರಿಸರ ವಿರೋಧಿ ಕ್ರಮವನ್ನು ಬಲವಾಗಿ ವಿರೋಧಿಸುತ್ತೇವೆ’ ಎಂದು ‘ಪರಿಸರಕ್ಕಾಗಿ ನಾವು ಸಂಘಟನೆ’ಯ ಸದಸ್ಯರು ಹೇಳಿದ್ದಾರೆ.</p><p>‘ಕಂಟೊನ್ಮೆಂಟ್ ರೈಲ್ವೇಸ್ ಕಾಲೊನಿ ಆವರಣದಲ್ಲಿ ‘ವಾಣಿಜ್ಯ ಅಭಿವೃದ್ಧಿ ಯೋಜನೆಗಾಗಿ‘ 368 ಮರಗಳನ್ನು ತೆರವುಗೊಳಿಸಲಾಗುತ್ತಿದೆ. ನಾಗರಿಕರು 10 ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಬಹುದು’ ಎಂದು ಬಿಬಿಎಂಪಿ ಅರಣ್ಯ ವಿಭಾಗ ಏ. 25ರಂದು ಪ್ರಕಟಣೆ ಹೊರಡಿಸಿದೆ.</p><p>‘ರೈಲು ಹಳಿ ಅಭಿವೃದ್ಧಿ ಹಾಗೂ ವಿಸ್ತರಣೆ ಕಾಮಗಾರಿಗಳಿಗಾಗಿ ಕಂಟೋನ್ಮೆಂಟ್ ರೈಲು ನಿಲ್ದಾಣ ಸುತ್ತಮತ್ತ ಮರಗಳನ್ನು ತೆರವು ಮಾಡಲು ಬಿಬಿಎಂಪಿಯಿಂದ ಅನುಮತಿ ಕೇಳಲಾಗಿದೆ. ತೆರವುಗೊಳಿಸಲಾಗುವ ಮರಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು’ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>