<p><strong>ಬೆಂಗಳೂರು:</strong> ಮಿದುಳು ನಿಷ್ಕ್ರೀಯವಾಗಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಅಂಗಾಗಗಳನ್ನು ಕುಟುಂಬಸ್ಥರು ದಾನ ಮಾಡಿರುವ ಘಟನೆಯು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಜರುಗಿದೆ.</p><p>ನ.29ರಂದು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್ ಕೆ.(46) ಎನ್ನುವವರಿಗೆ ಮಿದುಳು ನಿಷ್ಕ್ರೀಯವಾಗಿತ್ತು. ಚಿಕಿತ್ಸೆಗಾಗಿ ಯಶವಂತಪುರದಲ್ಲಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಗುಣಮುಖರಾಗುವ ಲಕ್ಷಣ ಕಂಡುಬಂದಿರಲಿಲ್ಲ. </p><p>ವೆಂಕಟೇಶ್ ಅವರಿಗೆ ಡಿ.1ರಂದು ಸಂಪೂರ್ಣ ಮಿದುಳು ನಿಷ್ಕ್ರೀಯವಾಗಿತ್ತು ಎಂದು ಅವರಿಗೆ ಚಿಕಿತ್ಸೆ ನೀಡುತಿದ್ದ ವೈದ್ಯರು ಮಾಹಿತಿ ನೀಡಿದ್ದಾರೆ.</p><p>ಆಘಾತದ ನಡುವೆಯೂ ಅವರ ಮೃತರ ಕುಟುಂಬದವರು ಅಂಗಾಗ ದಾನ ಮಾಡಲು ಬಯಸಿದ್ದರು. ಅವರ ಯಕೃತ್ತು, ಮೂತ್ರಪಿಂಡ, ಕಣ್ಣು, ಶ್ವಾಸಕೋಶ ಹಾಗೂ ಹೃದಯ ಕವಾಟಗಳನ್ನು ದಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.</p><p>ವೆಂಕಟೇಶ್ ಅವರು ಕಷ್ಟ ಜೀವಿಯಾಗಿದ್ದರು. ಅವರ ಅಂಗಾಗಗಳನ್ನು ದಾನ ಮಾಡುವ ಮೂಲಕ ಅವರ ಸಾವಿಗೆ ಗೌರವ ಸೂಚಿಸಿದ್ದೇವೆ. ಅಂಗಾಗ ದಾನದ ಮೂಲಕ ಅವರು ಇನ್ನೂ ನಮ್ಮ ಜೊತೆಗಿದ್ದಾರೆ ಎಂದು ಅನಿಸುತ್ತಿದೆ ಎಂದು ಅವರ ಸಹೋದರಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಿದುಳು ನಿಷ್ಕ್ರೀಯವಾಗಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಅಂಗಾಗಗಳನ್ನು ಕುಟುಂಬಸ್ಥರು ದಾನ ಮಾಡಿರುವ ಘಟನೆಯು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಜರುಗಿದೆ.</p><p>ನ.29ರಂದು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್ ಕೆ.(46) ಎನ್ನುವವರಿಗೆ ಮಿದುಳು ನಿಷ್ಕ್ರೀಯವಾಗಿತ್ತು. ಚಿಕಿತ್ಸೆಗಾಗಿ ಯಶವಂತಪುರದಲ್ಲಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಗುಣಮುಖರಾಗುವ ಲಕ್ಷಣ ಕಂಡುಬಂದಿರಲಿಲ್ಲ. </p><p>ವೆಂಕಟೇಶ್ ಅವರಿಗೆ ಡಿ.1ರಂದು ಸಂಪೂರ್ಣ ಮಿದುಳು ನಿಷ್ಕ್ರೀಯವಾಗಿತ್ತು ಎಂದು ಅವರಿಗೆ ಚಿಕಿತ್ಸೆ ನೀಡುತಿದ್ದ ವೈದ್ಯರು ಮಾಹಿತಿ ನೀಡಿದ್ದಾರೆ.</p><p>ಆಘಾತದ ನಡುವೆಯೂ ಅವರ ಮೃತರ ಕುಟುಂಬದವರು ಅಂಗಾಗ ದಾನ ಮಾಡಲು ಬಯಸಿದ್ದರು. ಅವರ ಯಕೃತ್ತು, ಮೂತ್ರಪಿಂಡ, ಕಣ್ಣು, ಶ್ವಾಸಕೋಶ ಹಾಗೂ ಹೃದಯ ಕವಾಟಗಳನ್ನು ದಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.</p><p>ವೆಂಕಟೇಶ್ ಅವರು ಕಷ್ಟ ಜೀವಿಯಾಗಿದ್ದರು. ಅವರ ಅಂಗಾಗಗಳನ್ನು ದಾನ ಮಾಡುವ ಮೂಲಕ ಅವರ ಸಾವಿಗೆ ಗೌರವ ಸೂಚಿಸಿದ್ದೇವೆ. ಅಂಗಾಗ ದಾನದ ಮೂಲಕ ಅವರು ಇನ್ನೂ ನಮ್ಮ ಜೊತೆಗಿದ್ದಾರೆ ಎಂದು ಅನಿಸುತ್ತಿದೆ ಎಂದು ಅವರ ಸಹೋದರಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>