ಮಳೆ ನೀರು ಮನೆಯೊಳಗೆ ಬರದಂತೆ ತಡೆಯಲು ಮಹಡಿ ಮೇಲೆ ಹತ್ತಿದ 28 ವರ್ಷದ ಆಟೊ ಚಾಲಕ, ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಜೆ.ಪಿ ನಗರದ ಆಸ್ಟರ್ ಆರ್ವಿ ಆಸ್ಪತ್ರೆಗೆ ಮೇ 21ರಂದು ದಾಖಲಿಸಲಾಗಿತ್ತು. ಮೇ 24ರಂದು ಅವರ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದರು. ಅವರಿಗೆ ಪತ್ನಿ ಹಾಗೂ ಒಂದೂವರೆ ವರ್ಷದ ಮಗುವಿದೆ. ಕುಟುಂಬದವರು ಅಂಗಾಂಗ ದಾನಕ್ಕೆ ಸಮ್ಮತಿ ಸೂಚಿಸಿದ್ದರಿಂದ ಹೃದಯ ಪಡೆದು, ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗೆ ಮೇ 25ರಂದು ಕಸಿ ನಡೆಸಲಾಯಿತು.