ಅವರ ಪತ್ನಿ ಅಂಧರಾಗಿದ್ದು, ಪುತ್ರಿ ಇದ್ದಾಳೆ. ಅನಿಯಂತ್ರಿತ ರಕ್ತದೊತ್ತಡದಿಂದ ಅವರಿಗೆ ಮಿದುಳಿನಲ್ಲಿ ರಕ್ತಸ್ರಾವವಾಗಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಜು.18ರಂದು ಯಶವಂತಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದರು. ಜು.20ರಂದು ಅವರ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದ ವೈದ್ಯರು, ಕುಟುಂಬದ ಸದಸ್ಯರ ಸಮ್ಮತಿ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆ ಕೈಗೊಂಡರು. ಹೃದಯ, ಶ್ವಾಸಕೋಶ, ಎರಡು ಮೂತ್ರಪಿಂಡಗಳು ಮತ್ತು ಕಾರ್ನಿಯಾವನ್ನು ದಾನವಾಗಿ ಪಡೆದರು ಎಂದು ಆಸ್ಪತ್ರೆ ತಿಳಿಸಿದೆ.