‘ಆಯುಷ್ಮಾನ್ ಭವ ಡಿಜಿಟಲ್ ಮಿಷನ್ ಅಡಿ ಈ ಕ್ಯೂಆರ್ ಕೋಡ್ ಅಭಿವೃದ್ಧಿಪಡಿಸಲಾಗಿದೆ. ಆಯುಷ್ಮಾನ್ ಭವ ಆರೋಗ್ಯ ಮೇಳದಲ್ಲಿ ಅಂಗಾಂಗ ದಾನದ ಮಹತ್ವವನ್ನು ಸಾರಲಾಗುತ್ತದೆ. ರಾಜ್ಯದ ಜೀವಸಾರ್ಥಕತೆ ಯೋಜನೆಯಡಿ ಒಟ್ಟು 35 ಸಾವಿರಕ್ಕೂ ಹೆಚ್ವು ಜನರು ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ಅಂಗಾಂಗ ದಾನಕ್ಕೆ ಪ್ರತಿಜ್ಞೆ ಕೈಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬದಲಾದ ಜೀವನ ಶೈಲಿಯಿಂದಾಗಿ ಮೂತ್ರಪಿಂಡ, ಯಕೃತ್ತು, ಹೃದಯ ಸೇರಿ ವಿವಿಧ ಅಂಗಾಂಗಗಳ ಕಸಿಗೆ 7 ಸಾವಿರಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ’ ಎಂದು ದಿನೇಶ್ ಗುಂಡೂರಾವ್ ಹೇಳಿದರು.