ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನೇರಿಯ ಸಿದ್ಧಗಿರಿ ಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ‘ಸಮಾವೇಶದಲ್ಲಿ ಸಾವಯವ ಕೃಷಿ, ಜೀವ ವೈವಿಧ್ಯ, ಗ್ರಾಮ ಜೀವನ ಸುಧಾರಣೆ, ಗೋ ಸಂರಕ್ಷಣೆ, ಪರಿಸರ ಸಂರಕ್ಷಣೆ, ಸಾವಯವ ಮಾರುಕಟ್ಟೆ, ಗ್ರಾಮೀಣ ಯುವಜನರಲ್ಲಿ ಕೃಷಿ ಮಹತ್ವದ ಅರಿವು, ಕೃಷಿಕರಿಗೆ ಕಂಕಣ ಭಾಗ್ಯ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. 10 ಸಾವಿರಕ್ಕೂ ಅಧಿಕ ಕೃಷಿಕರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಹೇಳಿದರು.