<p><strong>ಬೆಂಗಳೂರು</strong>: ‘ತೋಟಗಾರಿಕೆ ಇಲಾಖೆ, ಜೈವಿಕ್ ಕೃಷಿಕ್ ಸೊಸೈಟಿಯ ಸಹಯೋಗದಲ್ಲಿ ಮೇ 23ರಿಂದ 25ರವರೆಗೆ ಲಾಲ್ಬಾಗ್ನ ಡಾ.ಎಂ.ಎಚ್. ಮರೀಗೌಡ ಸಭಾಂಗಣದಲ್ಲಿ ಸಾವಯವ ಮಾವು ಮತ್ತು ಹಲಸಿನ ಹಬ್ಬವನ್ನು ಆಯೋಜಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ಡಿ.ಎಸ್. ರಮೇಶ್ ತಿಳಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 23ರಂದು ಮಧ್ಯಾಹ್ನ 3ಕ್ಕೆ ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಅವರು ಈ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 6ಗಂಟೆಯವರೆಗೆ ವಿವಿಧ ತಳಿಯ ಮಾವು ಮತ್ತು ಹಲಸಿನ ಹಣ್ಣುಗಳು ಹಾಗೂ ಅವುಗಳ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ, ಪ್ರದರ್ಶನ ಇರಲಿದೆ’ ಎಂದು ತಿಳಿಸಿದರು.</p>.<p>‘ಮಿಯಾಜಾಕಿ ಮಾವಿನ ಹಣ್ಣಿನ ಪ್ರದರ್ಶನ, ಅಪ್ಪೆ ಮಿಡಿ, ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವಿದೆ. ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿಯ ಹಣ್ಣುಗಳ ಮಾರಾಟವೂ ಇರಲಿದೆ’ ಎಂದರು.</p>.<p><strong>ಮಾಹಿತಿಗೆ:</strong> 81055 79839, 97426 96577.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ತೋಟಗಾರಿಕೆ ಇಲಾಖೆ, ಜೈವಿಕ್ ಕೃಷಿಕ್ ಸೊಸೈಟಿಯ ಸಹಯೋಗದಲ್ಲಿ ಮೇ 23ರಿಂದ 25ರವರೆಗೆ ಲಾಲ್ಬಾಗ್ನ ಡಾ.ಎಂ.ಎಚ್. ಮರೀಗೌಡ ಸಭಾಂಗಣದಲ್ಲಿ ಸಾವಯವ ಮಾವು ಮತ್ತು ಹಲಸಿನ ಹಬ್ಬವನ್ನು ಆಯೋಜಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ಡಿ.ಎಸ್. ರಮೇಶ್ ತಿಳಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 23ರಂದು ಮಧ್ಯಾಹ್ನ 3ಕ್ಕೆ ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಅವರು ಈ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 6ಗಂಟೆಯವರೆಗೆ ವಿವಿಧ ತಳಿಯ ಮಾವು ಮತ್ತು ಹಲಸಿನ ಹಣ್ಣುಗಳು ಹಾಗೂ ಅವುಗಳ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟ, ಪ್ರದರ್ಶನ ಇರಲಿದೆ’ ಎಂದು ತಿಳಿಸಿದರು.</p>.<p>‘ಮಿಯಾಜಾಕಿ ಮಾವಿನ ಹಣ್ಣಿನ ಪ್ರದರ್ಶನ, ಅಪ್ಪೆ ಮಿಡಿ, ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವಿದೆ. ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿಯ ಹಣ್ಣುಗಳ ಮಾರಾಟವೂ ಇರಲಿದೆ’ ಎಂದರು.</p>.<p><strong>ಮಾಹಿತಿಗೆ:</strong> 81055 79839, 97426 96577.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>