ಬೊಲ್ಲಾರ್ಡ್ಗಳಿಗೆ ವಾಹನಗಳು ಡಿಕ್ಕಿ ಹೊಡೆಯುವ ಸಂಖ್ಯೆಯೂ ಹೆಚ್ಚಾಗಿದ್ದು, ಬಿಬಿಎಂಪಿ ಅಧಿಕಾರಿಗಳಿಗೆ ಹೊಸ ತಲೆನೋವನ್ನು ತರಿಸಿದೆ. ಸದ್ಯಕ್ಕೆ ಬ್ಯಾರಿಕೇಡ್ಗಳನ್ನು ತೆರವುಗೊಳಿಸಿದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಅಳವಡಿಸಿದ ಬೊಲ್ಲಾರ್ಡ್ಗಳೇ ಅಪಘಾತಗಳಿಗೆ ಕಾರಣವಾಗುತ್ತಿವೆ. ರಸ್ತೆ ಮಧ್ಯದಲ್ಲಿ ಬೊಲ್ಲಾರ್ಡ್ಗಳನ್ನು ಅಳವಡಿಸಿದ್ದೇ ಅವೈಜ್ಞಾನಿಕ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.