ಹೊರ ವರ್ತುಲ ರಸ್ತೆಯಲ್ಲಿ ಮಳೆ ನೀರು ಮೂರು ದಿನ ಹರಿದು ಸಂಚಾರ ದಟ್ಟಣೆ ಸೃಷ್ಟಿಸಿದ ಸಂದರ್ಭದಲ್ಲಿ ‘ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರನ್ನು ಕಾಪಾಡಿ’ ಎಂದು ಪ್ರಧಾನಿ ಅವರಿಗೆ ಟ್ಯಾಗ್ ಮಾಡಿ ಉದ್ಯಮಿ ಟಿ.ವಿ. ಮೋಹನದಾಸ್ ಪೈ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಒಆರ್ಆರ್ಸಿಎ ಮುಖ್ಯಮಂತ್ರಿಗೆ ಪತ್ರ ಬರೆದು ಅದನ್ನು ಟ್ವೀಟ್ ಮಾಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.