ಶಾಸಕ ರಮೇಶ ಜಾರಕಿಹೊಳಿ ಇತ್ತೀಚೆಗೆ ಮಾತನಾಡಿ, ‘ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರು’ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸುಧಾಕರ್, ‘ಜಾರಕಿಹೊಳಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ನಾವು ಈಗ ಬಿಜೆಪಿಯಲ್ಲಿ ಇದ್ದೇವೆ. ಬೇರೆ ಪಕ್ಷದ ನಾಯಕರು ನಮ್ಮ ನಾಯಕರಾಗಲು ಸಾಧ್ಯವಿಲ್ಲ. ಸರಿಯಾದ ರೀತಿಯಲ್ಲಿ ಹೇಳಿಕೆ ನೀಡಬೇಕಿತ್ತು’ ಎಂದರು.