ಹೊಸಪೇಟೆ: ವಿಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಕುಂದುಕೊರತೆಗಳನ್ನು ಆಲಿಸಲು ಬಿಜೆಪಿ ಪಕ್ಷದ ಮುಖಂಡ ಎಚ್.ಆರ್.ಗವಿಯಪ್ಪ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸೋಮವಾರ ತಾಲ್ಲೂಕಿನ ಬುಕ್ಕಸಾಗರದಲ್ಲಿ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಗವಿಯಪ್ಪ, ‘ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಸಂಚರಿಸಿ ಮೂಲ ಸೌಕರ್ಯಗಳ ಪರಿಶೀಲನೆ ಮತ್ತು ಜನರ ಸಮಸ್ಯೆಗಳನ್ನು ಆಲಿಸಲು ಉದ್ದೇಶಿಸಿರುವೆ’ ಎಂದು ತಿಳಿಸಿದರು.
ಅಲ್ಲದೇ ‘ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.