<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳ ಅಸೋಸಿಯೇಷನ್ನವರೇ ಆ ಜಾಗದ ಮಾಲೀಕರಾಗುವಂತೆ ಕಾನೂನು ರೂಪಿಸುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.</p><p>ಬಿಜೆಪಿಯ ರವಿಸುಬ್ರಹ್ಮಣ್ಯ ಅವರ ಗಮನ ಸೆಳೆಯುವ ಸೂಚನೆಯಡಿ ವಿಷಯ ಪ್ರಸ್ತಾಪಿಸಿ, ಅಪಾರ್ಟ್ಮೆಂಟ್ ನಿರ್ಮಾಣದ ಜಾಗ ಜಮೀನಿನ ಮಾಲೀಕನ ಹೆಸರಿನಲ್ಲೇ ಇರುವುದರಿಂದ ಅನೇಕರು ಆ ಜಾಗದ ಮೇಲೆ ಸಾಲ ಪಡೆಯುತ್ತಿದ್ದಾರೆ. ಮುಂದೆ ಆ ಕಟ್ಟಡದ ಆಯಸ್ಸು ಮುಗಿದ ಮೇಲೆ, ಅಲ್ಲಿ ಮರು ನಿರ್ಮಾಣದ ವೇಳೆ ಅಲ್ಲಿ ವಾಸವಿರುವ ನಿವಾಸಿಗಳಿಗೆ ಯಾವುದೇ ಹಕ್ಕಿರುವುದಿಲ್ಲ. ಇದಕ್ಕಾಗಿ ಪ್ರತ್ಯೇಕ ಕಾನೂನು ತರಬೇಕು ಎಂದು ಹೇಳಿದರು.</p><p>ಇದಕ್ಕೆ ಉತ್ತರಿಸಿದ ಶಿವಕುಮಾರ್, ಅಕ್ರಮವಾಗಿ ಅಪಾರ್ಟ್ಮೆಂಟ್ಗಳನ್ನು ನಿರ್ಮಿಸುತ್ತಿರುವವರಿಂದ ಸಮಸ್ಯೆ ಆಗುತ್ತಿದೆ ಎಂದರು.</p><p>‘ಬಹುತೇಕ ಡೆವಲಪರ್ಗಳು ಆ ರೀತಿ ಮಾಡಲು ಹೋಗುವುದಿಲ್ಲ. ನನ್ನದೇ ಸಂಸ್ಥೆಗಳಲ್ಲಿ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣದ ನಂತರ ಜಮೀನಿನ ದಾಖಲೆಗಳನ್ನು ಅಲ್ಲಿನ ನಿವಾಸಿಗಳ ಅಸೋಸಿಯೇಷನ್ಗೆ ಹಸ್ತಾಂತರ ಮಾಡುತ್ತಾರೆ. ಅಕ್ರಮವಾಗಿ ನಿರ್ಮಾಣ ಮಾಡುವವರು ಈ ರೀತಿಯ ಕೆಲಸ ಮಾಡುತ್ತಿದ್ದಾರೆ. 2016 ರ ನಂತರ ರೇರಾ ಬಂದಿದೆ. ಬೆಂಗಳೂರಿನಲ್ಲಿ ನಾವು ಆಸ್ತಿಗಳ ಸಮೀಕ್ಷೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳ ಅಸೋಸಿಯೇಷನ್ನವರೇ ಆ ಜಾಗದ ಮಾಲೀಕರಾಗುವಂತೆ ಕಾನೂನು ರೂಪಿಸುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.</p><p>ಬಿಜೆಪಿಯ ರವಿಸುಬ್ರಹ್ಮಣ್ಯ ಅವರ ಗಮನ ಸೆಳೆಯುವ ಸೂಚನೆಯಡಿ ವಿಷಯ ಪ್ರಸ್ತಾಪಿಸಿ, ಅಪಾರ್ಟ್ಮೆಂಟ್ ನಿರ್ಮಾಣದ ಜಾಗ ಜಮೀನಿನ ಮಾಲೀಕನ ಹೆಸರಿನಲ್ಲೇ ಇರುವುದರಿಂದ ಅನೇಕರು ಆ ಜಾಗದ ಮೇಲೆ ಸಾಲ ಪಡೆಯುತ್ತಿದ್ದಾರೆ. ಮುಂದೆ ಆ ಕಟ್ಟಡದ ಆಯಸ್ಸು ಮುಗಿದ ಮೇಲೆ, ಅಲ್ಲಿ ಮರು ನಿರ್ಮಾಣದ ವೇಳೆ ಅಲ್ಲಿ ವಾಸವಿರುವ ನಿವಾಸಿಗಳಿಗೆ ಯಾವುದೇ ಹಕ್ಕಿರುವುದಿಲ್ಲ. ಇದಕ್ಕಾಗಿ ಪ್ರತ್ಯೇಕ ಕಾನೂನು ತರಬೇಕು ಎಂದು ಹೇಳಿದರು.</p><p>ಇದಕ್ಕೆ ಉತ್ತರಿಸಿದ ಶಿವಕುಮಾರ್, ಅಕ್ರಮವಾಗಿ ಅಪಾರ್ಟ್ಮೆಂಟ್ಗಳನ್ನು ನಿರ್ಮಿಸುತ್ತಿರುವವರಿಂದ ಸಮಸ್ಯೆ ಆಗುತ್ತಿದೆ ಎಂದರು.</p><p>‘ಬಹುತೇಕ ಡೆವಲಪರ್ಗಳು ಆ ರೀತಿ ಮಾಡಲು ಹೋಗುವುದಿಲ್ಲ. ನನ್ನದೇ ಸಂಸ್ಥೆಗಳಲ್ಲಿ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣದ ನಂತರ ಜಮೀನಿನ ದಾಖಲೆಗಳನ್ನು ಅಲ್ಲಿನ ನಿವಾಸಿಗಳ ಅಸೋಸಿಯೇಷನ್ಗೆ ಹಸ್ತಾಂತರ ಮಾಡುತ್ತಾರೆ. ಅಕ್ರಮವಾಗಿ ನಿರ್ಮಾಣ ಮಾಡುವವರು ಈ ರೀತಿಯ ಕೆಲಸ ಮಾಡುತ್ತಿದ್ದಾರೆ. 2016 ರ ನಂತರ ರೇರಾ ಬಂದಿದೆ. ಬೆಂಗಳೂರಿನಲ್ಲಿ ನಾವು ಆಸ್ತಿಗಳ ಸಮೀಕ್ಷೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>