<p>ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಆಮ್ಲಜನಕ ಉತ್ಪಾದಕರು ಮತ್ತು ಸರಬರಾಜುದಾರರ ಸಭೆಯಲ್ಲಿ ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಮ್ಲಜನಕ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚಿಸಲಾಯಿತು.</p>.<p>ಸಭೆಯಲ್ಲಿ ಚರ್ಚಿಸಲಾದ ಅಂಶಗಳು</p>.<p>1. ಆಮ್ಲಜನಕ ಟ್ಯಾಂಕರ್ಗಳ ಫಿಲ್ಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.</p>.<p>2. ಆಮ್ಲಜನಕ ಟ್ಯಾಂಕರ್ಗಳ ತಡೆರಹಿತ ಪ್ರಯಾಣಕ್ಕಾಗಿ ಗ್ರಿನ್ ಕಾರಿಡಾರ್ಗಳನ್ನು ಒದಗಿಸುವುದು.</p>.<p>3. ಟೋಲ್ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್ಗಳಿಗೆ ನಿರ್ದೇಶನ ನೀಡುವುದು.</p>.<p>4. ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್ಗಳನ್ನು ಆಮ್ಲಜನಕ ಸಾಗಣೆಗಾಗಿ ಪರಿವರ್ತಿಸಲು ಕ್ರಮವಹಿಸುವುದು.</p>.<p>5. ತುರ್ತು ಅಗತ್ಯಕ್ಕಾಗಿ ಆಮ್ಲಜನಕ ವಾಹನಗಳ ಚಾಲನೆಗಾಗಿ ಎಲ್ಪಿಜಿ ಟ್ಯಾಂಕರ್ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.</p>.<p>6. ಆಮ್ಲಜನಕ ಉತ್ಪಾದಕರು ಮತ್ತು ಸರಬರಾಜುದಾರರು ಆಮ್ಲಜನಕ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಯನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಮ್ಲಜನಕ ಪೂರೈಕೆ ಮಾಡಲು ಕೋರಲಾಯಿತು.</p>.<p>7. ಲಭ್ಯವಿರುವ ಟ್ಯಾಂಕರ್ಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಸೂಚಿಸಲಾಯಿತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಆಮ್ಲಜನಕ ಉತ್ಪಾದಕರು ಮತ್ತು ಸರಬರಾಜುದಾರರ ಸಭೆಯಲ್ಲಿ ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಮ್ಲಜನಕ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚಿಸಲಾಯಿತು.</p>.<p>ಸಭೆಯಲ್ಲಿ ಚರ್ಚಿಸಲಾದ ಅಂಶಗಳು</p>.<p>1. ಆಮ್ಲಜನಕ ಟ್ಯಾಂಕರ್ಗಳ ಫಿಲ್ಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.</p>.<p>2. ಆಮ್ಲಜನಕ ಟ್ಯಾಂಕರ್ಗಳ ತಡೆರಹಿತ ಪ್ರಯಾಣಕ್ಕಾಗಿ ಗ್ರಿನ್ ಕಾರಿಡಾರ್ಗಳನ್ನು ಒದಗಿಸುವುದು.</p>.<p>3. ಟೋಲ್ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್ಗಳಿಗೆ ನಿರ್ದೇಶನ ನೀಡುವುದು.</p>.<p>4. ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್ಗಳನ್ನು ಆಮ್ಲಜನಕ ಸಾಗಣೆಗಾಗಿ ಪರಿವರ್ತಿಸಲು ಕ್ರಮವಹಿಸುವುದು.</p>.<p>5. ತುರ್ತು ಅಗತ್ಯಕ್ಕಾಗಿ ಆಮ್ಲಜನಕ ವಾಹನಗಳ ಚಾಲನೆಗಾಗಿ ಎಲ್ಪಿಜಿ ಟ್ಯಾಂಕರ್ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.</p>.<p>6. ಆಮ್ಲಜನಕ ಉತ್ಪಾದಕರು ಮತ್ತು ಸರಬರಾಜುದಾರರು ಆಮ್ಲಜನಕ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಯನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಮ್ಲಜನಕ ಪೂರೈಕೆ ಮಾಡಲು ಕೋರಲಾಯಿತು.</p>.<p>7. ಲಭ್ಯವಿರುವ ಟ್ಯಾಂಕರ್ಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಸೂಚಿಸಲಾಯಿತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>