ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಆಮ್ಲಜನಕ ಉತ್ಪಾದಕರು ಮತ್ತು ಸರಬರಾಜುದಾರರ ಸಭೆಯಲ್ಲಿ ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಮ್ಲಜನಕ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚಿಸಲಾಯಿತು.