<p><strong>ಬೆಂಗಳೂರು:</strong> ಕೋವಿಡ್ ರೋಗಿಗಳಿಗೆ ವೈದ್ಯಕೀಯ ಆಮ್ಲಜನಕ ಕೊರತೆ ಉಂಟಾಗಿರುವ ಬೆನ್ನಲ್ಲೇ ನೆರೆಯ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಯೊಂದು ವೈದ್ಯಕೀಯ ಆಮ್ಲಜನಕ ಉತ್ಪಾದನೆಗೆ ಮುಂದಾಗಿದ್ದು, ಕರ್ನಾಟಕದಲ್ಲೂ ಇಂತಹ ಪ್ರಯತ್ನ ಆರಂಭಿಸಬಹುದೇ ಎಂಬ ಚರ್ಚೆ ಶುರುವಾಗಿದೆ.</p>.<p>ರಾಜ್ಯದಲ್ಲಿ 70 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳಿವೆ. ಕೆಲವು ಕಾರ್ಖಾನೆಗಳಾದರೂ ವೈದ್ಯಕೀಯ ಆಮ್ಲಜನಕ ತಯಾರಿಸಿದರೆ ಕೋವಿಡ್ಗೆ ನಿಯಂತ್ರಣಕ್ಕೆ ಸಹಕಾರಿ ಆಗಬಹುದು. ಇದರಿಂದ ಸಕ್ಕರೆ ಕಾರ್ಖಾನೆಯ ಸುತ್ತಮುತ್ತಲಿನ ಪಟ್ಟಣಗಳು ಮತ್ತು ನಗರಗಳಿಗೆ ಆಮ್ಲಜನಕವನ್ನು ಪೂರೈಸಬಹುದು. ಸಾಗಣೆಯ ಸಮಸ್ಯೆಯೂ ಇರುವುದಿಲ್ಲ ಎಂಬ ಅಭಿಪ್ರಾಯವೂ ಇದೆ.</p>.<p>ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ಧಾರಾಶಿವ ಶುಗರ್ ಮಿಲ್ ವೈದ್ಯಕೀಯ ಗುಣಮಟ್ಟದ ಆಮ್ಲಜನಕ ಉತ್ಪಾದನೆಗೆ ಕೈಹಾಕಿದ್ದು ದಿನಕ್ಕೆ 20 ಟನ್ ಆಮ್ಲಜನಕವನ್ನು ಉತ್ಪಾದಿಸಲು ಉದ್ದೇಶಿಸಿದೆ. ಇದಕ್ಕಾಗಿ ಸಕ್ಕರೆ ಕಾರ್ಖಾನೆ ತನ್ನ ಎಥೆನಾಲ್ ಘಟಕವನ್ನು ಮಾರ್ಪಾಡು ಮಾಡಿ ಈ ಕಾರ್ಯಕ್ಕೆ ಕೈ ಹಾಕಿದೆ.</p>.<p>ವಾತಾವರಣದಲ್ಲಿ ಬಿಡುಗಡೆಯಾಗುವ ಆಮ್ಲಜನಕವನ್ನು ಸೆಳೆದು ಸಂಸ್ಕರಿಸಿ ವೈದ್ಯಕೀಯ ಗುಣಮಟ್ಟದ ಆಮ್ಲಜನಕವನ್ನಾಗಿ ಪರಿವರ್ತಿಸುತ್ತದೆ. ಸಾಮಾನ್ಯ ಆಮ್ಲಜನಕವನ್ನು ವೈದ್ಯಕೀಯ ಆಮ್ಲಜನಕಾಗಿ ಪರಿವರ್ತಿಸುವ ಸಂಸ್ಕರಣಾ ಸಾಧನವನ್ನು ಅಳವಡಿಸಲಾಗಿದೆ. ಈ ಪ್ರಯತ್ನ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆ ವಲಯಲದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.</p>.<p>ವೈದ್ಯಕೀಯ ಆಮ್ಲಜನಕ ಇಂದು ಅತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಸ್ವಾಗತಿಸುತ್ತೇವೆ. ಧಾರಾಶಿವ ಶುಗರ್ ಮಿಲ್ ಆಮ್ಲಜನಕ ಉತ್ಪಾದಿಸುವಲ್ಲಿ ಯಶಸ್ವಿಯಾದರೆ, ಮುಂದೆ ಹಲವು ಕಾರ್ಖಾನೆ ಆ ಮಾದರಿಯನ್ನು ಅನುಸರಿಸಬಹುದು ಎಂದು ಕೆಲವು ಸಕ್ಕರೆ ಕಾರ್ಖಾನೆಗಳು ಅಭಿಪ್ರಾಯಪಟ್ಟಿವೆ.</p>.<p>ರಾಜ್ಯದ ಕೆಲವು ಸಕ್ಕರೆ ಕಾರ್ಖಾನೆಗಳ ಆಡಳಿತ ವರ್ಗವನ್ನು ಸಂಪರ್ಕಿಸಿದಾಗ, ಇದೊಂದು ಹೊಸ ಪರಿಕಲ್ಪನೆ. ಅಲ್ಲಿಯ ಮಾಹಿತಿಯನ್ನು ತರಿಸಿಕೊಂಡು ಆ ಬಳಿಕ ಚಿಂತನೆ ನಡೆಸಲಾಗುವುದು. ಸಾರ್ವಜನಿಕರಿಗೆ ಅನುಕೂಲ ಆಗುವುದಾದರೆ ಪರಿಶೀಲಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು.</p>.<p><strong>ಎನ್ಎಸ್ಯುಐನಿಂದ ಆಹಾರ ಪೂರೈಕೆ</strong><br /><strong>ಬೆಂಗಳೂರು:</strong> ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ 14 ದಿನಗಳ ಲಾಕ್ಡೌನ್ ಮಾದರಿಯ ಕರ್ಫ್ಯೂನಿಂದ ಸಂಕಷ್ಟಕ್ಕೀಡಾಗುವವರ ನೆರವಿಗೆ ಎನ್ಎಸ್ಯುಐ ಧಾವಿಸಿದೆ.</p>.<p>ಈ ಉದ್ದೇಶಕ್ಕಾಗಿ ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷ ಜಯೇಂದ್ರ ಎಸ್. ಮತ್ತು ಸಂಘಟನೆಯ ಇತರ ಪದಾದಿಕಾರಿಗಳು, ನಗರದಲ್ಲಿರುವ ಎನ್ಎಸ್ಯುಐ ಕಚೇರಿಯಲ್ಲಿ ಬುಧವಾರ ಅಡುಗೆ ಕೋಣೆ ಆರಂಭಿಸಿದ್ದಾರೆ.</p>.<p>ಆಸ್ಪತ್ರೆಗಳು, ಆಂಬುಲೆನ್ಸ್ಗಳು, ಚಿತಾಗಾರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಸೇರಿದಂತೆ ಕೋವಿಡ್ ಕಾರ್ಯದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡವರಿಗೆ ಇಲ್ಲಿಂದ ಆಹಾರ ಪೂರೈಸಲು ಅವರು ತೀರ್ಮಾನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ರೋಗಿಗಳಿಗೆ ವೈದ್ಯಕೀಯ ಆಮ್ಲಜನಕ ಕೊರತೆ ಉಂಟಾಗಿರುವ ಬೆನ್ನಲ್ಲೇ ನೆರೆಯ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಯೊಂದು ವೈದ್ಯಕೀಯ ಆಮ್ಲಜನಕ ಉತ್ಪಾದನೆಗೆ ಮುಂದಾಗಿದ್ದು, ಕರ್ನಾಟಕದಲ್ಲೂ ಇಂತಹ ಪ್ರಯತ್ನ ಆರಂಭಿಸಬಹುದೇ ಎಂಬ ಚರ್ಚೆ ಶುರುವಾಗಿದೆ.</p>.<p>ರಾಜ್ಯದಲ್ಲಿ 70 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳಿವೆ. ಕೆಲವು ಕಾರ್ಖಾನೆಗಳಾದರೂ ವೈದ್ಯಕೀಯ ಆಮ್ಲಜನಕ ತಯಾರಿಸಿದರೆ ಕೋವಿಡ್ಗೆ ನಿಯಂತ್ರಣಕ್ಕೆ ಸಹಕಾರಿ ಆಗಬಹುದು. ಇದರಿಂದ ಸಕ್ಕರೆ ಕಾರ್ಖಾನೆಯ ಸುತ್ತಮುತ್ತಲಿನ ಪಟ್ಟಣಗಳು ಮತ್ತು ನಗರಗಳಿಗೆ ಆಮ್ಲಜನಕವನ್ನು ಪೂರೈಸಬಹುದು. ಸಾಗಣೆಯ ಸಮಸ್ಯೆಯೂ ಇರುವುದಿಲ್ಲ ಎಂಬ ಅಭಿಪ್ರಾಯವೂ ಇದೆ.</p>.<p>ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ಧಾರಾಶಿವ ಶುಗರ್ ಮಿಲ್ ವೈದ್ಯಕೀಯ ಗುಣಮಟ್ಟದ ಆಮ್ಲಜನಕ ಉತ್ಪಾದನೆಗೆ ಕೈಹಾಕಿದ್ದು ದಿನಕ್ಕೆ 20 ಟನ್ ಆಮ್ಲಜನಕವನ್ನು ಉತ್ಪಾದಿಸಲು ಉದ್ದೇಶಿಸಿದೆ. ಇದಕ್ಕಾಗಿ ಸಕ್ಕರೆ ಕಾರ್ಖಾನೆ ತನ್ನ ಎಥೆನಾಲ್ ಘಟಕವನ್ನು ಮಾರ್ಪಾಡು ಮಾಡಿ ಈ ಕಾರ್ಯಕ್ಕೆ ಕೈ ಹಾಕಿದೆ.</p>.<p>ವಾತಾವರಣದಲ್ಲಿ ಬಿಡುಗಡೆಯಾಗುವ ಆಮ್ಲಜನಕವನ್ನು ಸೆಳೆದು ಸಂಸ್ಕರಿಸಿ ವೈದ್ಯಕೀಯ ಗುಣಮಟ್ಟದ ಆಮ್ಲಜನಕವನ್ನಾಗಿ ಪರಿವರ್ತಿಸುತ್ತದೆ. ಸಾಮಾನ್ಯ ಆಮ್ಲಜನಕವನ್ನು ವೈದ್ಯಕೀಯ ಆಮ್ಲಜನಕಾಗಿ ಪರಿವರ್ತಿಸುವ ಸಂಸ್ಕರಣಾ ಸಾಧನವನ್ನು ಅಳವಡಿಸಲಾಗಿದೆ. ಈ ಪ್ರಯತ್ನ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆ ವಲಯಲದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.</p>.<p>ವೈದ್ಯಕೀಯ ಆಮ್ಲಜನಕ ಇಂದು ಅತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಸ್ವಾಗತಿಸುತ್ತೇವೆ. ಧಾರಾಶಿವ ಶುಗರ್ ಮಿಲ್ ಆಮ್ಲಜನಕ ಉತ್ಪಾದಿಸುವಲ್ಲಿ ಯಶಸ್ವಿಯಾದರೆ, ಮುಂದೆ ಹಲವು ಕಾರ್ಖಾನೆ ಆ ಮಾದರಿಯನ್ನು ಅನುಸರಿಸಬಹುದು ಎಂದು ಕೆಲವು ಸಕ್ಕರೆ ಕಾರ್ಖಾನೆಗಳು ಅಭಿಪ್ರಾಯಪಟ್ಟಿವೆ.</p>.<p>ರಾಜ್ಯದ ಕೆಲವು ಸಕ್ಕರೆ ಕಾರ್ಖಾನೆಗಳ ಆಡಳಿತ ವರ್ಗವನ್ನು ಸಂಪರ್ಕಿಸಿದಾಗ, ಇದೊಂದು ಹೊಸ ಪರಿಕಲ್ಪನೆ. ಅಲ್ಲಿಯ ಮಾಹಿತಿಯನ್ನು ತರಿಸಿಕೊಂಡು ಆ ಬಳಿಕ ಚಿಂತನೆ ನಡೆಸಲಾಗುವುದು. ಸಾರ್ವಜನಿಕರಿಗೆ ಅನುಕೂಲ ಆಗುವುದಾದರೆ ಪರಿಶೀಲಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು.</p>.<p><strong>ಎನ್ಎಸ್ಯುಐನಿಂದ ಆಹಾರ ಪೂರೈಕೆ</strong><br /><strong>ಬೆಂಗಳೂರು:</strong> ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ 14 ದಿನಗಳ ಲಾಕ್ಡೌನ್ ಮಾದರಿಯ ಕರ್ಫ್ಯೂನಿಂದ ಸಂಕಷ್ಟಕ್ಕೀಡಾಗುವವರ ನೆರವಿಗೆ ಎನ್ಎಸ್ಯುಐ ಧಾವಿಸಿದೆ.</p>.<p>ಈ ಉದ್ದೇಶಕ್ಕಾಗಿ ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷ ಜಯೇಂದ್ರ ಎಸ್. ಮತ್ತು ಸಂಘಟನೆಯ ಇತರ ಪದಾದಿಕಾರಿಗಳು, ನಗರದಲ್ಲಿರುವ ಎನ್ಎಸ್ಯುಐ ಕಚೇರಿಯಲ್ಲಿ ಬುಧವಾರ ಅಡುಗೆ ಕೋಣೆ ಆರಂಭಿಸಿದ್ದಾರೆ.</p>.<p>ಆಸ್ಪತ್ರೆಗಳು, ಆಂಬುಲೆನ್ಸ್ಗಳು, ಚಿತಾಗಾರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಸೇರಿದಂತೆ ಕೋವಿಡ್ ಕಾರ್ಯದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡವರಿಗೆ ಇಲ್ಲಿಂದ ಆಹಾರ ಪೂರೈಸಲು ಅವರು ತೀರ್ಮಾನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>