<p><strong>ಬೆಂಗಳೂರು:</strong> ‘ಸಾಲ ತೀರಿಸಿದ್ದರೂ ಬ್ಯಾಂಕ್ ನಮಗೆ ಇನ್ನೂ ಋಣಮುಕ್ತ ಪತ್ರ ನೀಡಿಲ್ಲ’ ಎಂಬ ಆಕ್ಷೇಪಣೆಯನ್ನು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಕಂಪನಿ (ಯುಎಸ್ಎಲ್) ಹೈಕೋರ್ಟ್ಗೆ ತಿಳಿಸಿದೆ.</p>.<p>ಈ ಕುರಿತಂತೆ ಐಡಿಬಿಐ ಮತ್ತು ಯುನಿಟ್ ಟ್ರಸ್ಟ್ ಆಫ್ ಇಂಡಿಯಾ ಇನ್ವೆಸ್ಟ್ಮೆಂಟ್ ಕಂಪನಿ ವಿರುದ್ದ ಯುಎಸ್ಎಲ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಯುಎಸ್ಎಲ್ ಕಂಪನಿ ಪರ ಹಾಜರಿದ್ದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಪಿ.ಚಿದಂಬರಂ, ‘ಕಂಪನಿಯು ₹ 625 ಕೋಟಿ ಬ್ಯಾಂಕ್ ಸಾಲವನ್ನು ಈಗಾಗಲೇ ಹಿಂದಿರುಗಿಸಿದೆ. ಆದಾಗ್ಯೂ, ಬ್ಯಾಂಕ್ ನಮಗಿನ್ನೂ ಋಣಮುಕ್ತ ಪತ್ರ ನೀಡುತ್ತಿಲ್ಲ’ ಎಂದು ಆಕ್ಷೇಪಿಸಿದರು.</p>.<p>ಸುದೀರ್ಘ ವಾದ ಮಂಡಿಸಿದ ಅವರು, ‘ಉದ್ಯಮಿ ವಿಜಯ್ ಮಲ್ಯ ಒಡೆತನದ ಕಿಂಗ್ಫಿಷರ್ ವಾಯುಯಾನ ಕಂಪನಿ ಪಡೆದಿರುವ ಸಾಲಕ್ಕೆ ನಾವು ಹೊಣೆಗಾರರಲ್ಲ’ ಎಂದು ವಿವರಿಸಿದರು.</p>.<p class="Subhead">ಬ್ಯಾಂಕ್ ಆಕ್ಷೇಪ: ‘ಸಾಲ ನೀಡುವಾಗ ಮಲ್ಯ ಯುಎಸ್ಎಲ್ ಕಂಪನಿ ಅಧ್ಯಕ್ಷರಾಗಿದ್ದರು. ಈ ಕಾರಣಕ್ಕಾಗಿಯೇ ಸಾಲ ನೀಡಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಅಂದು ಕಂಪನಿಯು ಬ್ರಾಂಡ್ ವ್ಯಾಲ್ಯೂ ನೋಡಿಯೇ ಸಾಲ ನೀಡಲಾಗಿತ್ತು. ಈಗ ಅವರು ಆ ಸ್ಥಾನದಲ್ಲಿ ಇಲ್ಲ ಎಂದಾಕ್ಷಣ ಅಂದಿನ ಪ್ರಕರಣದಿಂದ ಬಚಾವಾಗಲು ಸಾಧ್ಯವಿಲ್ಲ’ ಎಂಬುದು ಬ್ಯಾಂಕ್ ಪರ ವಕೀಲರ ವಾದವಾಗಿದೆ.</p>.<p>ಐಡಿಬಿಐ ಕೆಲವು ದಾಖಲೆಗಳನ್ನು ಸಲ್ಲಿಸಲು ಕಾಲಾವಕಾಶ ಕೋರಿದ ಕಾರಣ ನ್ಯಾಯಪೀಠವು, ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಲ ತೀರಿಸಿದ್ದರೂ ಬ್ಯಾಂಕ್ ನಮಗೆ ಇನ್ನೂ ಋಣಮುಕ್ತ ಪತ್ರ ನೀಡಿಲ್ಲ’ ಎಂಬ ಆಕ್ಷೇಪಣೆಯನ್ನು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಕಂಪನಿ (ಯುಎಸ್ಎಲ್) ಹೈಕೋರ್ಟ್ಗೆ ತಿಳಿಸಿದೆ.</p>.<p>ಈ ಕುರಿತಂತೆ ಐಡಿಬಿಐ ಮತ್ತು ಯುನಿಟ್ ಟ್ರಸ್ಟ್ ಆಫ್ ಇಂಡಿಯಾ ಇನ್ವೆಸ್ಟ್ಮೆಂಟ್ ಕಂಪನಿ ವಿರುದ್ದ ಯುಎಸ್ಎಲ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಯುಎಸ್ಎಲ್ ಕಂಪನಿ ಪರ ಹಾಜರಿದ್ದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಪಿ.ಚಿದಂಬರಂ, ‘ಕಂಪನಿಯು ₹ 625 ಕೋಟಿ ಬ್ಯಾಂಕ್ ಸಾಲವನ್ನು ಈಗಾಗಲೇ ಹಿಂದಿರುಗಿಸಿದೆ. ಆದಾಗ್ಯೂ, ಬ್ಯಾಂಕ್ ನಮಗಿನ್ನೂ ಋಣಮುಕ್ತ ಪತ್ರ ನೀಡುತ್ತಿಲ್ಲ’ ಎಂದು ಆಕ್ಷೇಪಿಸಿದರು.</p>.<p>ಸುದೀರ್ಘ ವಾದ ಮಂಡಿಸಿದ ಅವರು, ‘ಉದ್ಯಮಿ ವಿಜಯ್ ಮಲ್ಯ ಒಡೆತನದ ಕಿಂಗ್ಫಿಷರ್ ವಾಯುಯಾನ ಕಂಪನಿ ಪಡೆದಿರುವ ಸಾಲಕ್ಕೆ ನಾವು ಹೊಣೆಗಾರರಲ್ಲ’ ಎಂದು ವಿವರಿಸಿದರು.</p>.<p class="Subhead">ಬ್ಯಾಂಕ್ ಆಕ್ಷೇಪ: ‘ಸಾಲ ನೀಡುವಾಗ ಮಲ್ಯ ಯುಎಸ್ಎಲ್ ಕಂಪನಿ ಅಧ್ಯಕ್ಷರಾಗಿದ್ದರು. ಈ ಕಾರಣಕ್ಕಾಗಿಯೇ ಸಾಲ ನೀಡಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಅಂದು ಕಂಪನಿಯು ಬ್ರಾಂಡ್ ವ್ಯಾಲ್ಯೂ ನೋಡಿಯೇ ಸಾಲ ನೀಡಲಾಗಿತ್ತು. ಈಗ ಅವರು ಆ ಸ್ಥಾನದಲ್ಲಿ ಇಲ್ಲ ಎಂದಾಕ್ಷಣ ಅಂದಿನ ಪ್ರಕರಣದಿಂದ ಬಚಾವಾಗಲು ಸಾಧ್ಯವಿಲ್ಲ’ ಎಂಬುದು ಬ್ಯಾಂಕ್ ಪರ ವಕೀಲರ ವಾದವಾಗಿದೆ.</p>.<p>ಐಡಿಬಿಐ ಕೆಲವು ದಾಖಲೆಗಳನ್ನು ಸಲ್ಲಿಸಲು ಕಾಲಾವಕಾಶ ಕೋರಿದ ಕಾರಣ ನ್ಯಾಯಪೀಠವು, ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>